September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

ಬೆಳ್ತಂಗಡಿ : ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಮನೆಯಿಂದ ಜ‌.14 ರಂದು 5 ಗಂಟೆಗೆ ಹೊರಟು ಹೋದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಪುತ್ರ ಬಾಲಕ ಸುಮಂತ್(15) ಎಂಬಾತ ದೇವಸ್ಥಾನಕ್ಕೂ ತಲುಪದೆ ಮನೆಗೂ ವಾಪಾಸು ಹೋಗದೆ ನಾಪತ್ತೆಯಾಗಿ ಆತನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆರೆಯ ನೀರನ್ನು ಖಾಲಿ ಮಾಡಿ ತನಿಖೆ ನಡೆಸಿದ ವೇಳೆ ನೀಲಿ ಬಣ್ಣದ ಟಾರ್ಚ್ ಲೈಟ್ ಪತ್ತೆಯಾಗಿದೆ.

ಇದರೊಂದಿಗೆ ಕೆರೆಯಲ್ಲಿ ಹಳೆಯ ತುಕ್ಕು ಹಿಡಿದ ಕತ್ತಿಯೊಂದು ಪತ್ತೆಯಾಗಿದೆ. ಪೋಲಿಸ್ ನಿರೀಕ್ಷಕ ಸುಬ್ಬಪುರ್ ಮಠ ಹಾಗೂ ಎಸ್ ಐ ಆನಂದ ನೇತೃತ್ವದ ತಂಡ ಪತ್ತೆ ಹಚ್ಚಿದೆ. ಈ ಬಗ್ಗೆ ಸೋಕೋ ತಂಡ ಪರಿಶೀಲನೆ ನಡೆಸಿ ವರದಿ ನೀಡಲಿದೆ‌. ಟಾರ್ಚ್ ಲೈಟ್ ಬಾಲಕ ಸುಮಂತ್ ಹಿಡಿದುಕೊಂಡು ಹೋಗಿದ್ದ ಲೈಟ್ ಆಗಿದೆಯೇ ಎಂಬ ಸಂಶಯ ಇದೆ. ಪೋಲಿಸರು ಮತ್ತಷ್ಟು ತನಿಖೆಯನ್ನು ಬಿರುಸುಗೊಳಿಸಿದ್ದಾರೆ.

Related posts

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಎರಡನೆಯ ಅಧ್ಯಾಯ

Suddi Udaya

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

Suddi Udaya
error: Content is protected !!