25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಯನಾಡು: ಅರೆಪ್ರಜ್ಞಾ ಸ್ಥಿತಿಯಲ್ಲಿ ಒಂದುವರೆ ವರ್ಷದ ಚಿರತೆ ಪತ್ತೆ

ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ನೈನಾಡು ಸಮೀಪದ ಪಿಲಾತಬೆಟ್ಟು ನಿನ್ಯಾರು ಎಂಬಲ್ಲಿ ಒಂದುವರೆ ವರ್ಷದ ಚಿರತೆಯೊಂದು ಸೆರೆಯಾದ ಬಗ್ಗೆ ಜ.15 ರಂದು ವರದಿಯಾಗಿದೆ.

ಅರೆಪ್ರಜ್ಞಾ ಸ್ಥಿತಿಯಲ್ಲಿ ನಿನ್ಯಾರು ಪರಿಸರದ ಖಾಸಗಿ ಜಮೀನಿನ ರಬ್ಬರ್ ತೋಟದಲ್ಲಿ ಚಿರತೆ ಪತ್ತೆಯಾಗಿದೆ. ಎಲ್ಲಿಂದಲೋ ಉರುಳಿಗೆ ಬಿದ್ದಿದ್ದ ಚಿರತೆ ಅರಪ್ರಜ್ಞಾ ಸ್ಥಿತಿಯಲ್ಲಿ ಅಲ್ಲಿ ಬಿದ್ದಿತ್ತು. ಮಂಗಳೂರು ವೃತ್ತದ ವನ್ಯಜೀವಿ ಪಶುವೈದ್ಯ ಡಾ.ಯಶಸ್ವಿ ನಾರಾವಿ ಆಗಮಿಸಿ ಅರವಳಿಕೆ ಮದ್ದು ನೀಡಿ ಸಿಕ್ಕಿಹಾಕಿಕೊಂಡಿದ ಉರುಳನ್ನು ತೆಗೆದು ಬಳಿಕ ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

ಮೂಡಬಿದರೆ ಎಸಿಎಫ್ ಶ್ರೀಧರ್.ಪಿ ಮಾರ್ಗದರ್ಶನದಲ್ಲಿ ವೇಣೂರು ವಲಯ ಅರಣ್ಯಾಧಿಕಾರಿ ಭರತ್.ಯು.ಜಿ ನೇತೃತ್ವದ ಡಿ.ಆರ್.ಡಿ.ಒ ಅಶ್ವಿತ್ ಗಟ್ಟಿ ಮತ್ತು ಸುನಿಲ್ ಕುಮಾರ್, ಗಸ್ತು ಅರಣ್ಯ ಪಾಲಕ ಸುರೇಶ್ ಮತ್ತು ದಿವಕರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಅರಣ್ಯ ಇಲಾಖೆ ಯ ಅಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಚಿರತೆ ಹಿಡಿಯುವ ಬೋನನ್ನು ಸ್ನೇಹಗಿರಿ ಪರಿಸರದ ವ್ಯಾಪ್ತಿಯಲ್ಲಿ ಅಳವಡಿಸಲಾಗಿತ್ತು. ಸ್ನೇಹಗಿರಿಯಲ್ಲಿ ಬೋನು ಅಳವಡಿಸಲು ನೈನಾಡು ಶ್ರೀ ರಾಮ ಯುವಕ ಸಂಘದ ಸದಸ್ಯರುಗಳು ಸಹಕಾರ ನೀಡಿದ್ದರು.

ನೈನಾಡು, ಹೊಸಪಟ್ಣ ವ್ಯಾಪ್ತಿಯಲ್ಲಿ ಚಿರತೆಯ ಓಡಾಡುವಿಕೆ ದಿನನಿತ್ಯ ಕಂಡು ಬರುತ್ತಿದೆ. ಜ.೧೪ ರಾತ್ರಿ ಹೊಸಪಟ್ಣ ಪರಾರಿ ಸುರೇಶ್ ಪೂಜಾರಿಯವರ ಮನೆಯ ಕೋಳಿಯನ್ನು ಹೊತ್ತೊಯ್ದಿದ್ದು, ನಂತರ ಹೊಸಪಟ್ಣ ದೊಡ್ಯಾರು ಸಮೀಪ ಚಿರತೆಯ ಕೂಗು ಇಡೀ ರಾತ್ರಿ ಕೇಳುತ್ತಲೇ ಇತ್ತು ಎಂದು ಊರ ಕೃಷಿಕರು ತಿಳಿಸಿದ್ದಾರೆ. ಇದರಿಂದ ಕೃಷಿಕರಿಗೆ ಹಾಗೂ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ತುಂಬಾ ಆತಂಕಕ್ಕೀಡಾಗಿದ್ದಾರೆ. ಇದೀಗ ಹೊಸಪಟ್ಣದ ದೊಡ್ಯಾರು ಸಮೀಪ ಬೋನು ಅಳವಡಿಸುವಂತೆ ನಾಗರಿಕರು ತಿಳಿಸಿದ್ದಾರೆ.

Related posts

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

Suddi Udaya

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya
error: Content is protected !!