26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಯನಾಡು: ಅರೆಪ್ರಜ್ಞಾ ಸ್ಥಿತಿಯಲ್ಲಿ ಒಂದುವರೆ ವರ್ಷದ ಚಿರತೆ ಪತ್ತೆ

ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ನೈನಾಡು ಸಮೀಪದ ಪಿಲಾತಬೆಟ್ಟು ನಿನ್ಯಾರು ಎಂಬಲ್ಲಿ ಒಂದುವರೆ ವರ್ಷದ ಚಿರತೆಯೊಂದು ಸೆರೆಯಾದ ಬಗ್ಗೆ ಜ.15 ರಂದು ವರದಿಯಾಗಿದೆ.

ಅರೆಪ್ರಜ್ಞಾ ಸ್ಥಿತಿಯಲ್ಲಿ ನಿನ್ಯಾರು ಪರಿಸರದ ಖಾಸಗಿ ಜಮೀನಿನ ರಬ್ಬರ್ ತೋಟದಲ್ಲಿ ಚಿರತೆ ಪತ್ತೆಯಾಗಿದೆ. ಎಲ್ಲಿಂದಲೋ ಉರುಳಿಗೆ ಬಿದ್ದಿದ್ದ ಚಿರತೆ ಅರಪ್ರಜ್ಞಾ ಸ್ಥಿತಿಯಲ್ಲಿ ಅಲ್ಲಿ ಬಿದ್ದಿತ್ತು. ಮಂಗಳೂರು ವೃತ್ತದ ವನ್ಯಜೀವಿ ಪಶುವೈದ್ಯ ಡಾ.ಯಶಸ್ವಿ ನಾರಾವಿ ಆಗಮಿಸಿ ಅರವಳಿಕೆ ಮದ್ದು ನೀಡಿ ಸಿಕ್ಕಿಹಾಕಿಕೊಂಡಿದ ಉರುಳನ್ನು ತೆಗೆದು ಬಳಿಕ ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

ಮೂಡಬಿದರೆ ಎಸಿಎಫ್ ಶ್ರೀಧರ್.ಪಿ ಮಾರ್ಗದರ್ಶನದಲ್ಲಿ ವೇಣೂರು ವಲಯ ಅರಣ್ಯಾಧಿಕಾರಿ ಭರತ್.ಯು.ಜಿ ನೇತೃತ್ವದ ಡಿ.ಆರ್.ಡಿ.ಒ ಅಶ್ವಿತ್ ಗಟ್ಟಿ ಮತ್ತು ಸುನಿಲ್ ಕುಮಾರ್, ಗಸ್ತು ಅರಣ್ಯ ಪಾಲಕ ಸುರೇಶ್ ಮತ್ತು ದಿವಕರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಅರಣ್ಯ ಇಲಾಖೆ ಯ ಅಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಚಿರತೆ ಹಿಡಿಯುವ ಬೋನನ್ನು ಸ್ನೇಹಗಿರಿ ಪರಿಸರದ ವ್ಯಾಪ್ತಿಯಲ್ಲಿ ಅಳವಡಿಸಲಾಗಿತ್ತು. ಸ್ನೇಹಗಿರಿಯಲ್ಲಿ ಬೋನು ಅಳವಡಿಸಲು ನೈನಾಡು ಶ್ರೀ ರಾಮ ಯುವಕ ಸಂಘದ ಸದಸ್ಯರುಗಳು ಸಹಕಾರ ನೀಡಿದ್ದರು.

ನೈನಾಡು, ಹೊಸಪಟ್ಣ ವ್ಯಾಪ್ತಿಯಲ್ಲಿ ಚಿರತೆಯ ಓಡಾಡುವಿಕೆ ದಿನನಿತ್ಯ ಕಂಡು ಬರುತ್ತಿದೆ. ಜ.೧೪ ರಾತ್ರಿ ಹೊಸಪಟ್ಣ ಪರಾರಿ ಸುರೇಶ್ ಪೂಜಾರಿಯವರ ಮನೆಯ ಕೋಳಿಯನ್ನು ಹೊತ್ತೊಯ್ದಿದ್ದು, ನಂತರ ಹೊಸಪಟ್ಣ ದೊಡ್ಯಾರು ಸಮೀಪ ಚಿರತೆಯ ಕೂಗು ಇಡೀ ರಾತ್ರಿ ಕೇಳುತ್ತಲೇ ಇತ್ತು ಎಂದು ಊರ ಕೃಷಿಕರು ತಿಳಿಸಿದ್ದಾರೆ. ಇದರಿಂದ ಕೃಷಿಕರಿಗೆ ಹಾಗೂ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ತುಂಬಾ ಆತಂಕಕ್ಕೀಡಾಗಿದ್ದಾರೆ. ಇದೀಗ ಹೊಸಪಟ್ಣದ ದೊಡ್ಯಾರು ಸಮೀಪ ಬೋನು ಅಳವಡಿಸುವಂತೆ ನಾಗರಿಕರು ತಿಳಿಸಿದ್ದಾರೆ.

Related posts

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya

ಹಿಂದೂ ರಾಷ್ಟ್ರದ ಉದ್ಘಾರದೊಂದಿಗೆ ಬಂಟ್ವಾಳದ ಸ್ಪರ್ಶಾ ಕಲಾಮಂದಿರದಲ್ಲಿ ಪ್ರಾರಂಭವಾದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ

Suddi Udaya

ಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ, ಭಜನಾ ಸಂಕೀರ್ತನೆ ಉದ್ಘಾಟನೆ

Suddi Udaya

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ

Suddi Udaya
error: Content is protected !!