July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಲಾಯಿಲದಲ್ಲಿರುವ ನೂರೂಲ್‌ಹುದಾ ಕಟ್ಟಡದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನೂತನವಾಗಿ ಆರಂಭಿಸಿದ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಕಂಪ್ಯೂಟರ್ಸ್, ವಾಟರ್ ಪ್ಯೂರಿಫಯರ್, ‌ಸೆಕ್ಯೂರಿಟಿ ಸಿಸ್ಟಮ್ ಜ.15ರಂದು ಶುಭಾರಂಭಗೊಂಡಿತು.

ಸಹ ಸಂಸ್ಥೆಯ ಉದ್ಘಾಟನೆಯನ್ನು ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಎಂ.ಕೆ, ಉದ್ಘಾಟಿಸಿದರು. ಶ್ರೀಮತಿ ಮತ್ತು ಪ್ರೇಮ ರಾಜಪ್ಪ ಗೌಡ, ಶ್ರೀಮತಿ ಮತ್ತು ಶ್ರೀ ಜಯಲಕ್ಷ್ಮಿ ರಾಜಣ್ಣ ಬೆಂಗಳೂರು ಇವರು ದೀಪ ಪ್ರಜ್ವಲನೆಗೊಳಿಸಿದರು.

ನಾಳ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕ್ಷೇತ್ರದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಅಸ್ರಣ್ಣರು ಆಗಮಿಸಿ ನೂತನ ಸಂಸ್ಥೆಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾದ ಲಾಯಿಲ ನೂರುಲ್ ಹುದಾ ಮಸೀದಿಯ ಧರ್ಮಗುರು ಉಬೈದುಲ್ಲಾ ಸಖಾಫಿ ಮುಈನಿ ಎಂ.ಎ, ಫಾ| ಪೌಲ್ ಒಸಿಡಿ, ಕಾರ್ಮೆಲ್ ಸದನ ಲಾಯಿಲ, ಲಾಯಿಲ ನೂರುಲ್ ಹುದಾ ಜುಮ್ಮಾ ಮಸೀದಿ ಅಧ್ಯಕ್ಷ ಅಬ್ದುಲ್ ಹನೀಫ್, ಬೆಳ್ಳಾರೆ
ಸ್ನೇಹ ಇಲೆಕ್ಟಿಕಲ್ಸ್ ಮಾಲಕ ಹೊನ್ನಪ್ಪ, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಎಚ್. ಕೃಷ್ಣಯ್ಯ ಇಡ್ಯಾ, ಬೆಳ್ತಂಗಡಿ ಜೆಸಿಐ ಅಧ್ಯಕ್ಷ
ಜಿತೇಶ್ ಕುಮಾರ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ಲಾಯಿಲ ಗ್ರಾಮ ಪಂಚಾಯತ್ ಸದಸ್ಯರುಗಳಾದ ಅರವಿಂದ, ಗಣೇಶ್, ನಿವೃತ್ತ ಶಿಕ್ಷಕ ಸುರೇಶ್, ವ್ಯವಸ್ಥಾಪಕ ನಿರ್ದೇಶಕ ಅವಿನಾಶ್ ಎ.ಆರ್. ರವರ ಮನೆಯವರು, ಬಂಧು ಮಿತ್ರರು ಉಪಸ್ಥಿತರಿದ್ದರು.

ಎಸ್.ಎಂ.ಎಸ್ ಗ್ರೂಪ್ಸ್ ನ ವ್ಯವಸ್ಥಾಪಕ ನಿರ್ದೇಶಕ ಅವಿನಾಶ್ ಎ.ಆರ್. ರವರು ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಸರಕಾರಿ ಬಸ್ಸಿನಲ್ಲೇ ಹೃದಯಾಘಾತವಾಗಿ ಲಾಯಿಲದ ಇಲೆಕ್ಟ್ರೀಷಿಯನ್ ತಾಜ್ ಬಾವುಂಞಿ ನಿಧನ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya

ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಧರ್ಮಸ್ಥಳದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

Suddi Udaya
error: Content is protected !!