30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮರಸ್ಯದ ಸಂಕ್ರಾಂತಿಗೆ ವೇಣೂರಿನಲ್ಲಿ ಚಾಲನೆ: ಪರಿಶಿಷ್ಟ ಜಾತಿ ಕುಟುಂಬಿಕರೊಂದಿಗೆ ಸಂಕ್ರಾಂತಿ ಆಚರಿಸಿದ ಶಾಸಕ ಹರೀಶ್ ಪೂಂಜ

ವೇಣೂರು: ನಾಡಿನೆಲ್ಲೆಡೆಲೆ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿಯ ಸಂಭ್ರಮ. ಈ ಹಬ್ಬದಲ್ಲಿ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು, ತಟ್ಟೆಯಲ್ಲಿ ಎಳ್ಳು ಬೆಲ್ಲ, ಕಬ್ಬು ಅರಶಿನ ಕುಂಕುಮ ಇಟ್ಟುಕೊಂಡು ಪ್ರೀತಿ ಪಾತ್ರರಿಗೆ ಎಳ್ಳು ಬೆಲ್ಲವನ್ನು ಜೊತೆಗೆ ಪ್ರೀತಿಯನ್ನು ಹಂಚುವ ದಿನ. ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಈ ಬಾರಿ ಬೆಳ್ತಂಗಡಿ ಕ್ಷೇತ್ರದಲ್ಲಿ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು.

ಬೆಳ್ತಂಗಡಿ ತಾಲೂಕಿನ ಎಲ್ಲಾ ಪರಿಶಿಷ್ಟ ಜಾತಿಯ ಬಂಧುಗಳ ಕಾಲನಿಗಳಲ್ಲಿ ಜ.೧೪ರಂದು ಸಂಕ್ರಾಂತಿ ಹಬ್ಬವನ್ನು ‘ಸಾಮರಸ್ಯದ ಸಂಕ್ರಾಂತಿ’ ಎಂಬ ವಿಶಿಷ್ಟ ಕಲ್ಪನೆಯಲ್ಲಿ ಆಚರಿಸಿದರು. ನಾರಾವಿ ಮಹಾಶಕ್ತಿಕೇಂದ್ರದ ವ್ಯಾಪ್ತಿಯ ಪ.ಜಾತಿ ಬಂಧುಗಳ ಕಾಲೋನಿಗಳಿಗೆ ತೆರಳಿದ ಶಾಸಕ ಹರೀಶ್ ಪೂಂಜ ಅವರು ಉಡುಗೊರೆ ಸಹಿತ ಸಾಮರಸ್ಯದ ಸಂಕ್ರಮಣದ ಶುಭ ಹಾರೈಸಿದರು. ಈ ಸರಣಿ ಕಾರ್ಯಕ್ರಮಕ್ಕೆ ವೇಣೂರು ಆದಿಶಕ್ತಿ ಭಜನಾ ಮಂದಿರದಲ್ಲಿ ಚಾಲನೆ ನೀಡಲಾಯಿತು.

ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ೧೦೦ ವರ್ಷ ಆದ ಸಂಭ್ರಮದ ಪ್ರೇರಣೆ ಪಡೆದು ಸರ್ವರನ್ನೂ ಬಂಧುಭಾವದಿಂದ ಅಭಿವೃದ್ಧಿಯೆಡೆಗೆ ಜೊತೆಗೆ ಕರೆದೊಯ್ಯುವ ಸಂಕಲ್ಪದೊಂದಿಗೆ ಈ ವಿಶಿಷ್ಟ ಕಾರ್ಯಕ್ರಮ ನಡೆಸಿದರು. ಪರಿಶಿಷ್ಟ ಬಂಧುಗಳು ತಯಾರಿಸಿ ಬಡಿಸಿದ ಉಪಹಾರಾದಿ ಆತಿಥ್ಯ ಸ್ವೀಕರಿಸಲಾಯಿತು. ಕಾರ್ಯಕ್ರಮದ ಚಾಲನೆ ವೇಳೆ ಸ್ಥಳೀಯ ಹಿರಿಯರು, ಜನಪ್ರತಿನಿಧಿಗಳು ಹಾಗೂ ಕಾಲನಿ ನಿವಾಸಿಗಳು ಉಪಸ್ಥಿತರಿದ್ದರು.

Related posts

ಕಲ್ಮಂಜ ಶಾಲಾ ಶತ ಸಂಭ್ರಮಕ್ಕೆ ಮುಖ್ಯಮಂತ್ರಿಗಳಿಂದ ಶುಭಹಾರೈಕೆ

Suddi Udaya

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಖೋ ಖೋ ಪಂದ್ಯಾಟ: ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ದಾನ

Suddi Udaya

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

Suddi Udaya
error: Content is protected !!