23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು. ದಿ. ವಸಂತ ಬಂಗೇರರವರ ಸಂಸ್ಥೆಯೊಂದಿಗಿನ ಒಡನಾಟ ಮತ್ತು ಶಾಲೆಯ ವಿಭಿನ್ನ ಸಾಮರ್ಥ್ಯದ ಮಕ್ಕಳ ಬಗೆಗಿನ ಅವಾರ ಕಾಳಜಿಯಿಂದಾಗಿ ಪ್ರತೀ ವರ್ಷವೂ ವಿಭಿನ್ನ ಕಾರ್ಯಕ್ರಮಗಳನ್ನು ಶಾಲೆಯ ಮಕ್ಕಳಿಗಾಗಿ ಅವರ ಹುಟ್ಟು ಹಬ್ಬ ಹಾಗೂ ಪುಣ್ಯಸ್ಮರಣೆಯ ಅಂಗವಾಗಿ ಅವರ ಕುಟುಂಬಸ್ಥರು ಆಚರಿಸುತ್ತಾ ಬಂದಿರುತ್ತಾರೆ.

ಈ ಬಾರಿಯೂ ಶ್ರೀಯುತರ 80 ನೇ ವರ್ಷದ ಹುಟ್ಟುಹಬ್ಬದ ಪರವಾಗಿ ಶಾಲೆಯ ವಿಭಿನ್ನ ಸಾಮರ್ಥ್ಯ ಹೊಂದಿರುವ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಶಾಲೆಯ ನಿರ್ದೇಶಕರು, ವಿಶೇಷ ಚೇತನ ಮಕ್ಕಳು ಹಾಗೂ ಸಿಬ್ಬಂದಿಗಳು ಶ್ರೀಯುತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲೆಂದು ಭಗವಂತನಲ್ಲಿ ಬೇಡುತ್ತಾ, ಅವರ ಕುಟುಂಬಸ್ಥರ ಈ ಉದಾತ್ತ ಹೃದಯಕ್ಕೆ ಹಾಗೂ ಶಾಲೆಯ ವಿಶೇಷ ಚೇತನ ಮಕ್ಕಳ ಪರ ಅವರು ತೋರುತ್ತಿರುವ ಅಕ್ಕರೆ, ವಾತ್ಸಲ್ಯಕ್ಕೆ ವಂದಿಸಿದರು.

ಶಾಲೆಯ 107 ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿಶೇಷ ಭೋಜನವನ್ನು ಸವಿದು, ದಿ. ವಸಂತ ಬಂಗೇರ ರವರ ಆತ್ಮದ ಚಿರಶಾಂತಿಗಾಗಿ ಹಾಗೂ ಅವರ ಕುಟುಂಬಸ್ಥರ ಉತ್ತಮ ಆಯುರಾರೋಗ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸಿದರು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿಯ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

Suddi Udaya

ನಾರ್ಯ ಪೊದುಂಬಿಲ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya
error: Content is protected !!