September 6, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು. ದಿ. ವಸಂತ ಬಂಗೇರರವರ ಸಂಸ್ಥೆಯೊಂದಿಗಿನ ಒಡನಾಟ ಮತ್ತು ಶಾಲೆಯ ವಿಭಿನ್ನ ಸಾಮರ್ಥ್ಯದ ಮಕ್ಕಳ ಬಗೆಗಿನ ಅವಾರ ಕಾಳಜಿಯಿಂದಾಗಿ ಪ್ರತೀ ವರ್ಷವೂ ವಿಭಿನ್ನ ಕಾರ್ಯಕ್ರಮಗಳನ್ನು ಶಾಲೆಯ ಮಕ್ಕಳಿಗಾಗಿ ಅವರ ಹುಟ್ಟು ಹಬ್ಬ ಹಾಗೂ ಪುಣ್ಯಸ್ಮರಣೆಯ ಅಂಗವಾಗಿ ಅವರ ಕುಟುಂಬಸ್ಥರು ಆಚರಿಸುತ್ತಾ ಬಂದಿರುತ್ತಾರೆ.

ಈ ಬಾರಿಯೂ ಶ್ರೀಯುತರ 80 ನೇ ವರ್ಷದ ಹುಟ್ಟುಹಬ್ಬದ ಪರವಾಗಿ ಶಾಲೆಯ ವಿಭಿನ್ನ ಸಾಮರ್ಥ್ಯ ಹೊಂದಿರುವ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಶಾಲೆಯ ನಿರ್ದೇಶಕರು, ವಿಶೇಷ ಚೇತನ ಮಕ್ಕಳು ಹಾಗೂ ಸಿಬ್ಬಂದಿಗಳು ಶ್ರೀಯುತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲೆಂದು ಭಗವಂತನಲ್ಲಿ ಬೇಡುತ್ತಾ, ಅವರ ಕುಟುಂಬಸ್ಥರ ಈ ಉದಾತ್ತ ಹೃದಯಕ್ಕೆ ಹಾಗೂ ಶಾಲೆಯ ವಿಶೇಷ ಚೇತನ ಮಕ್ಕಳ ಪರ ಅವರು ತೋರುತ್ತಿರುವ ಅಕ್ಕರೆ, ವಾತ್ಸಲ್ಯಕ್ಕೆ ವಂದಿಸಿದರು.

ಶಾಲೆಯ 107 ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿಶೇಷ ಭೋಜನವನ್ನು ಸವಿದು, ದಿ. ವಸಂತ ಬಂಗೇರ ರವರ ಆತ್ಮದ ಚಿರಶಾಂತಿಗಾಗಿ ಹಾಗೂ ಅವರ ಕುಟುಂಬಸ್ಥರ ಉತ್ತಮ ಆಯುರಾರೋಗ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸಿದರು.

Related posts

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ/ ಉಪಾಧ್ಯಕ್ಷರ ಆಯ್ಕೆ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

Suddi Udaya
error: Content is protected !!