23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಗುರುವಾಯನಕರೆ ಇಲ್ಲಿ ಪ್ರತೀ ಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಫೆ. 6 ರಿಂದ 14 ರ ವರೆಗೆ ನಡೆಯಲಿದ್ದು, ಜ.16ರಂದು ಪೋಸ್ಟರ್ ಬಿಡುಗಡೆಗೊಳಿಸಲಾಯಿತು.

ಸುನ್ನೀ ಸಂಯುಕ್ತ ಜಮಾಅತ್ ಖಾಝಿ, ಇಂಡಿಯನ್ ಗ್ರ್ಯಾಂಡ್ ಮುಫ್ತಿ, ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅವರ ನೇತೃತ್ವದಲ್ಲಿ, ದರ್ಗಾ ಸಮಿತಿ ಅಧ್ಯಕ್ಷ ಅಬ್ದುಲ್ ರಹಿಮಾನ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರತಿದಿನ ರಾತ್ರಿ ಕರ್ನಾಟಕ, ಕೇರಳದ ಪ್ರಮುಖ ಧಾರ್ಮಿಕ ವಿದ್ವಾಂಸರಿಂದ ಉಪನ್ಯಾಸ ಮಾಲಿಕೆಗಳು ನಡೆಯಲಿದೆ.


ಉರೂಸ್ ಪ್ರಯುಕ್ತ ದಾನಿಗಳ‌ ನೆರವಿನಿಂದ ನಡೆಸಿಕೊಂಡು ಬರುತ್ತಿರುವ ಸಾಮೂಹಿಕ ವಿವಾಹ ಸಮಾರಂಭ ಫೆ. 8.ರಂದು ನಡೆಯಲಿದೆ. ಇದರಲ್ಲಿ‌ ದಾಂಪತ್ಯ ಜೀವನಕ್ಕೆ ಕಾಲಿರಿಸುವ ವಧುಗಳಿಗೆ ಚಿನ್ನಾಭರಣ, ವಸ್ರ್ತ, ವರ ರಿಗೆ ವಸ್ರ್ತ ಹಾಗೂ ವಾಚ್ ಕೊಡುಗೆಯಾಗಿ ನೀಡಲಾಗುವುದು.

ಫೆ.12 ರಂದು ಶಹೀದೈನಿ ಮಾಲೆ ಆಲಾಪನೆ ಹಾಗೂ ವಿವರಣೆ ನಡೆಯಲಿದೆ. ಅದೇ ದಿನ ರಾತ್ರಿ ವಾರ್ಷಿಕ್ ದಿಕ್ರ್ ಹಲ್ಖಾ ಮಜ್ಲಿಸ್ ನಡೆಯಲಿದೆ. ಫೆ.14 ರಂದು ಖತ್ಮುಲ್ ಕುರ್‌ಆನ್, ರಾತ್ರಿ ಉರೂಸ್ ಸಮಾರೋಪ ನಡೆಯಲಿದೆ. ಸಯ್ಯಿದ್ ಕುಂಬೋಳ್ ತಂಙಳ್, ಸಯ್ಯಿದ್ ಸಾದಾತ್ ತಂಙಳ್, ಸಯ್ಯಿದ್ ಕಾಜೂರು ತಂಙಳ್, ಸಯ್ಯಿದ್ ವಾದಿ ಇರ್ಫಾನ್ ತಂಙಳ್, ಸಯ್ಯಿದ್ ಮನ್ಶರ್ ತಂಙಳ್, ಸಯ್ಯಿದ್ ದಾರುಸ್ಸಲಾಂ ತಂಙಳ್, ಸಯ್ಯಿದ್ ಮಸ್‌ಊದ್ ತಂಙಳ್ ಕೂರತ್ ಮೊದಲಾದವರಲ್ಲದೆ ವಿವಿಧ ದಿನಗಳಲ್ಲಿ ಅನೇಕ ಮಂದಿ ಧಾರ್ಮಿಕ ವಿದ್ವಾಂಸರುಗಳು,‌ ಸಾಮಾಜಿಕ ಕ್ಷೇತ್ರದ ಗಣ್ಯರುಗಳು ಭಾಗವಹಿಸಲಿದ್ದಾರೆ.

ಪೋಸ್ಟರ್ ಬಿಡುಗಡೆಯ ಸಂದರ್ಭ ಖತೀಬ್ ಅಬ್ದುಲ್ ಬಾರಿ ಸ‌ಅದಿ, ಜಮಾಅತ್ ಅಧ್ಯಕ್ಷ ಯಾಕೂಬ್ ಮುಸ್ಲಿಯಾರ್ ಸಹಿತ ಉರೂಸ್ ಸಮಿತಿ ಹಾಗೂ ಆಡಳಿತ ಸಮಿತಿ ಪದಾಧಿಕಾರಿಗಳು, ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳು, ಜಮಾಅತ್ ಬಾಂಧವರು ಉಪಸ್ಥಿತರಿದ್ದರು.

Related posts

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya

ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಜಿಲ್ಲಾ ಬಂದ್‌ಗೆ ತಾಲೂಕಿನಲ್ಲಿ ಬೆಂಬಲ: ಅಂಗಡಿ-ಮುಂಗಟ್ಟುಗಳು ಬಂದ್; ಸಂಚಾರ ಸ್ಥಗಿತಗೊಳಿಸಿದ ಕೆಎಸ್ಸಾರ್ಟಿಸಿ, ಖಾಸಗಿ ಬಸ್‌ಗಳು

Suddi Udaya

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

Suddi Udaya
error: Content is protected !!