23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

ಇಂದಬೆಟ್ಟು: ಬಂಗಾಡಿ ಅರಮನೆಯ ಹಿರಿಯರಾದ , ಬಾಂಗ್ವಾಡಿ ಬಂಗ ಅರಸರ ವಂಶಸ್ಥರಾದ ಶತಾಯುಷಿ ರವಿರಾಜ್ ಬಲ್ಲಾಳ್ (104ವ) ರವರು ಅಲ್ಪಕಾಲದ ಅಸೌಖ್ಯದಿಂದ ಜ.16 ರಂದು ವಿಧಿವಶರಾಗಿದ್ದಾರೆ.

ಬಂಗ ಅರಸರ ರಾಜಧಾನಿಯಾಗಿದ್ದ ಬಂಗಾಡಿಯ ಅರಮನೆಯನ್ನು ಕೆಲವೊಂದು ಮಾರ್ಪಾಡುಗಳನ್ನು ಮಾಡಿ ಇಂದಿಗೂ ರವಿರಾಜ ಬಲ್ಲಾಳ್ ಅವರು ಬಂಗಾಡಿ ಅರಮನೆಯನ್ನು ಸಂರಕ್ಷಿಸಿಕೊಂಡು ಬಂದಿದ್ದರು. ‘ಬಂಗರಸರ ಮೂಲ ಹಾಗೂ ಪರಿಚಯ, ಇವರ ಆಳ್ವಿಕೆಯಲ್ಲಿ ನಿರ್ಮಿಸಿದ ಶ್ರವಣಗುಂಡ, ಶಾಂತಿನಾಥ ಸ್ವಾಮಿಯ ಬಸದಿ, ಜೈನ ಅರಸರ ಕಾಲದಲ್ಲಿ ಇದ್ದ ಪದ್ಧತಿ, ದಕ್ಷಿಣ ಕನ್ನಡ ಜಿಲ್ಲೆಯನ್ನಾಲಿದ ಜೈನ ಅರಸರು, ಹೆಗ್ಗಡೆ ಹಾಗೂ ಬಲ್ಲಾಳರ ಸರ್ವಧರ್ಮದ ಕೊಡುಗೆ ಬಂಗರಸರ ಕಾಲದ ಕೆಲವು ಶಾಸನಗಳು ಶಾಸನದಲ್ಲಿರುವ ನೂನ್ಯತೆಯ ವಿವರ ಬಂಗರಸರ ವಂಶಾವಳಿ ಲಕ್ಷ್ಮಪ್ಪರಸ ಬಂಗರ ಸ್ವಾತಂತ್ರ್ಯ ಚಳುವಳಿಯ ಎಲ್ಲಾ ವಿವರವೂ ಲಕ್ಷ್ಮಪ್ಪ ಬಂಗರ ಸ್ವಾತಂತ್ರ್ಯ ಚಳುವಳಿಯ ಎಲ್ಲಾ ವಿವರಗಳನ್ನು ಬಿ.ರವಿರಾಜ್ ಬಲ್ಲಾಳರು ಸಂಶೋಧಿಸಿ ‘ ಬಂಗ ಅರಸರ ಇತಿಹಾಸ’ ಪುಸ್ತಕವನ್ನು ಬರೆದು ಅದರಲ್ಲಿ ದಾಖಲಿಸಿದ್ದಾರೆ. ಅಲ್ಲದೆ ಹಲವಾರು ಲೇಖನಗಳನ್ನು, ಬರಹಗಳನ್ನು ರವಿರಾಜ ಬಲ್ಲಾಳ್ ಅವರು ಬರೆದಿದ್ದಾರೆ.

ಮೃತರು ಇಬ್ಬರು ಪುತ್ರರಾದ ಯಶೋಧರ ಬಲ್ಲಾಳ್, ಅಜಿತ್ ಬಲ್ಲಾಳ್, ಪುತ್ರಿ ಜಯರತ್ನ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ 354 ನೇ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಕೊಲ್ಲಿ: ನೋಣಯ್ಯ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ : ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮೂರನೇ ಬಾರಿ ಮೆಡಿಕಲ್ ಟೆಸ್ಟ್

Suddi Udaya
error: Content is protected !!