22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

ಇಂದಬೆಟ್ಟು: ಬಂಗಾಡಿ ಅರಮನೆಯ ಹಿರಿಯರಾದ , ಬಾಂಗ್ವಾಡಿ ಬಂಗ ಅರಸರ ವಂಶಸ್ಥರಾದ ಶತಾಯುಷಿ ರವಿರಾಜ್ ಬಲ್ಲಾಳ್ (104ವ) ರವರು ಅಲ್ಪಕಾಲದ ಅಸೌಖ್ಯದಿಂದ ಜ.16 ರಂದು ವಿಧಿವಶರಾಗಿದ್ದಾರೆ.

ಬಂಗ ಅರಸರ ರಾಜಧಾನಿಯಾಗಿದ್ದ ಬಂಗಾಡಿಯ ಅರಮನೆಯನ್ನು ಕೆಲವೊಂದು ಮಾರ್ಪಾಡುಗಳನ್ನು ಮಾಡಿ ಇಂದಿಗೂ ರವಿರಾಜ ಬಲ್ಲಾಳ್ ಅವರು ಬಂಗಾಡಿ ಅರಮನೆಯನ್ನು ಸಂರಕ್ಷಿಸಿಕೊಂಡು ಬಂದಿದ್ದರು. ‘ಬಂಗರಸರ ಮೂಲ ಹಾಗೂ ಪರಿಚಯ, ಇವರ ಆಳ್ವಿಕೆಯಲ್ಲಿ ನಿರ್ಮಿಸಿದ ಶ್ರವಣಗುಂಡ, ಶಾಂತಿನಾಥ ಸ್ವಾಮಿಯ ಬಸದಿ, ಜೈನ ಅರಸರ ಕಾಲದಲ್ಲಿ ಇದ್ದ ಪದ್ಧತಿ, ದಕ್ಷಿಣ ಕನ್ನಡ ಜಿಲ್ಲೆಯನ್ನಾಲಿದ ಜೈನ ಅರಸರು, ಹೆಗ್ಗಡೆ ಹಾಗೂ ಬಲ್ಲಾಳರ ಸರ್ವಧರ್ಮದ ಕೊಡುಗೆ ಬಂಗರಸರ ಕಾಲದ ಕೆಲವು ಶಾಸನಗಳು ಶಾಸನದಲ್ಲಿರುವ ನೂನ್ಯತೆಯ ವಿವರ ಬಂಗರಸರ ವಂಶಾವಳಿ ಲಕ್ಷ್ಮಪ್ಪರಸ ಬಂಗರ ಸ್ವಾತಂತ್ರ್ಯ ಚಳುವಳಿಯ ಎಲ್ಲಾ ವಿವರವೂ ಲಕ್ಷ್ಮಪ್ಪ ಬಂಗರ ಸ್ವಾತಂತ್ರ್ಯ ಚಳುವಳಿಯ ಎಲ್ಲಾ ವಿವರಗಳನ್ನು ಬಿ.ರವಿರಾಜ್ ಬಲ್ಲಾಳರು ಸಂಶೋಧಿಸಿ ‘ ಬಂಗ ಅರಸರ ಇತಿಹಾಸ’ ಪುಸ್ತಕವನ್ನು ಬರೆದು ಅದರಲ್ಲಿ ದಾಖಲಿಸಿದ್ದಾರೆ. ಅಲ್ಲದೆ ಹಲವಾರು ಲೇಖನಗಳನ್ನು, ಬರಹಗಳನ್ನು ರವಿರಾಜ ಬಲ್ಲಾಳ್ ಅವರು ಬರೆದಿದ್ದಾರೆ.

ಮೃತರು ಇಬ್ಬರು ಪುತ್ರರಾದ ಯಶೋಧರ ಬಲ್ಲಾಳ್, ಅಜಿತ್ ಬಲ್ಲಾಳ್, ಪುತ್ರಿ ಜಯರತ್ನ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Suddi Udaya

ಸೈಂಟ್‌ ಮೇರಿಸ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ

Suddi Udaya
error: Content is protected !!