23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

ಇಂದಬೆಟ್ಟು: ಬಂಗಾಡಿ ಅರಮನೆಯ ಹಿರಿಯರಾದ , ಬಾಂಗ್ವಾಡಿ ಬಂಗ ಅರಸರ ವಂಶಸ್ಥರಾದ ಶತಾಯುಷಿ ರವಿರಾಜ್ ಬಲ್ಲಾಳ್ (104ವ) ರವರು ಅಲ್ಪಕಾಲದ ಅಸೌಖ್ಯದಿಂದ ಜ.16 ರಂದು ವಿಧಿವಶರಾಗಿದ್ದಾರೆ.

ಬಂಗ ಅರಸರ ರಾಜಧಾನಿಯಾಗಿದ್ದ ಬಂಗಾಡಿಯ ಅರಮನೆಯನ್ನು ಕೆಲವೊಂದು ಮಾರ್ಪಾಡುಗಳನ್ನು ಮಾಡಿ ಇಂದಿಗೂ ರವಿರಾಜ ಬಲ್ಲಾಳ್ ಅವರು ಬಂಗಾಡಿ ಅರಮನೆಯನ್ನು ಸಂರಕ್ಷಿಸಿಕೊಂಡು ಬಂದಿದ್ದರು. ‘ಬಂಗರಸರ ಮೂಲ ಹಾಗೂ ಪರಿಚಯ, ಇವರ ಆಳ್ವಿಕೆಯಲ್ಲಿ ನಿರ್ಮಿಸಿದ ಶ್ರವಣಗುಂಡ, ಶಾಂತಿನಾಥ ಸ್ವಾಮಿಯ ಬಸದಿ, ಜೈನ ಅರಸರ ಕಾಲದಲ್ಲಿ ಇದ್ದ ಪದ್ಧತಿ, ದಕ್ಷಿಣ ಕನ್ನಡ ಜಿಲ್ಲೆಯನ್ನಾಲಿದ ಜೈನ ಅರಸರು, ಹೆಗ್ಗಡೆ ಹಾಗೂ ಬಲ್ಲಾಳರ ಸರ್ವಧರ್ಮದ ಕೊಡುಗೆ ಬಂಗರಸರ ಕಾಲದ ಕೆಲವು ಶಾಸನಗಳು ಶಾಸನದಲ್ಲಿರುವ ನೂನ್ಯತೆಯ ವಿವರ ಬಂಗರಸರ ವಂಶಾವಳಿ ಲಕ್ಷ್ಮಪ್ಪರಸ ಬಂಗರ ಸ್ವಾತಂತ್ರ್ಯ ಚಳುವಳಿಯ ಎಲ್ಲಾ ವಿವರವೂ ಲಕ್ಷ್ಮಪ್ಪ ಬಂಗರ ಸ್ವಾತಂತ್ರ್ಯ ಚಳುವಳಿಯ ಎಲ್ಲಾ ವಿವರಗಳನ್ನು ಬಿ.ರವಿರಾಜ್ ಬಲ್ಲಾಳರು ಸಂಶೋಧಿಸಿ ‘ ಬಂಗ ಅರಸರ ಇತಿಹಾಸ’ ಪುಸ್ತಕವನ್ನು ಬರೆದು ಅದರಲ್ಲಿ ದಾಖಲಿಸಿದ್ದಾರೆ. ಅಲ್ಲದೆ ಹಲವಾರು ಲೇಖನಗಳನ್ನು, ಬರಹಗಳನ್ನು ರವಿರಾಜ ಬಲ್ಲಾಳ್ ಅವರು ಬರೆದಿದ್ದಾರೆ.

ಮೃತರು ಇಬ್ಬರು ಪುತ್ರರಾದ ಯಶೋಧರ ಬಲ್ಲಾಳ್, ಅಜಿತ್ ಬಲ್ಲಾಳ್, ಪುತ್ರಿ ಜಯರತ್ನ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸವಣಾಲು: ಹೇರಾಜೆ ನಿವಾಸಿ ರಘು ಶೆಟ್ಟಿ ನಿಧನ

Suddi Udaya

ಉಜಿರೆ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.95 ಫಲಿತಾಂಶ

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!