30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಬೆಳ್ತಂಗಡಿ: ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗಾಢ ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ.

ರವಿರಾಜ ಬಳ್ಳಾಲ್ ಧರ್ಮಾನುರಾಗಿಗಳಾಗಿದ್ದು ಬಂಗಾಡಿ ಬಸದಿಯನ್ನೇ ಅತಿಶಯ ಕ್ಷೇತ್ರವಾಗಿ ಬೆಳೆಸಿದರು. ಸದಾ ಸ್ವಾಧ್ಯಾಯ ನಿರತರಾಗಿದ್ದ ಅವರು ಧರ್ಮ, ಸಾಹಿತ್ಯ, ಕಲೆ, ಸಂಸ್ಕೃತಿ, ಆಧ್ಯಾತ್ಮಿಕ ಸಾಧನೆ ಬಗ್ಯೆ ಚಿಂತನ-ಮಂಥನ ನಡೆಸುತ್ತಿದ್ದರು.
ಬಂಗಾಡಿಯಲ್ಲಿ ಹಲವಾರು ಧರ್ಮಪ್ರಭಾವನಾ ಕಾರ್ಯಗಳನ್ನು ಹಮ್ಮಿಕೊಂಡಿದ್ದರು. ಕೃಷಿ, ತೋಟಗಾರಿಕೆಯಲ್ಲಿಯೂ ಅವರಿಗೆ ವಿಶೇಷ ಆಸಕ್ತಿ-ಅನುಭವ ಇತ್ತು.

ಧರ್ಮಸ್ಥಳದ ಪರಮ ಭಕ್ತರೂ, ಅಭಿಮಾನಿಯೂ ಆಗಿದ್ದ ಅವರು ಕ್ಷೇತ್ರದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು.
ಧರ್ಮಸ್ಥಳದ ಭವ್ಯ ಇತಿಹಾಸ ಮತ್ತು ಪರಂಪರೆ ಬಗ್ಗೆ ಅವರು ಅಮೂಲ್ಯ ಕೃತಿಯೊಂದನ್ನೂ ರಚಿಸಿದ್ದರು.

Related posts

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!