ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.22-24: ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ

ವೇಣೂರು: ಕರಿಮಣೇಲು, ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಜ.22 ರಿಂದ ಜ.24ರವರೆಗೆ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಶ್ರೀಪಾದ ಪಾಂಗಣ್ಣಾಯರ ನೇತೃತ್ವದಲ್ಲಿ ಚಂದ್ರಶೇಖರ ಅಸ್ರಣ್ಣರವರ ಪೌರೋಹಿತ್ಯದಲ್ಲಿ
ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಶ್ರೀ ದೈವ ಕೊಡಮಣಿತ್ತಾಯ ಮತ್ತು ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಸತೀಶ್ ಪೂಜಾರಿ ಚಿಗುರು ತಿಳಿಸಿದ್ದಾರೆ.

ಜ.22 ಬೆಳಿಗ್ಗೆ ನವಕ ಕಲಶಾಭಿಷೇಕ, ಗಣಹೋಮ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರಿಂದ
ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ. ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ , ಸಂಜೆ ಭಜನೆ, ರಾತ್ರಿ ರಂಗಪೂಜೆ, ನಿತ್ಯಬಲಿ ಉತ್ಸವ

ಜ.23 ಬೆಳಿಗ್ಗೆ ಶ್ರೀ ದೇವರಿಗೆ ಏಕಾದಶ ರುದ್ರಾಭಿಷೇಕ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ಮುಹೂರ್ತ ಕಂಭ, ಮಧ್ಯಾಹ್ನ ಗುರ್ಜಿ ಹಾಕುವುದು. ಸಂಜೆ ಗುತ್ತುಗಳಿಂದ ದೈವಗಳ ಭಂಡಾರ ಆಗಮನ., ರಾತ್ರಿ ನಿತ್ಯಬಲಿ, ಉತ್ಸವ. ಶ್ರೀ ದೈವ, ಶ್ರೀ ಕೊಡಮಣಿತ್ತಾಯ ನೇಮೋತ್ಸವ.

ಜ.24 ಬೆಳಿಗ್ಗೆ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ಧಾರ್ಮಿಕ ಸಭೆ, ರಾತ್ರಿ ರಂಗಪೂಜೆ, ಪರಿವಾರ ದೇವರುಗಳಿಗೆ ವಿಶೇಷ ಪೂಜೆ, ಉತ್ಸವ, ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ ನಡೆಯಲಿದೆ.

Related posts

ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ

Suddi Udaya

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

Suddi Udaya

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತೀ ಖರೀದಿಯ ಮೇಲೆ ಶೇ. 20 ರಿಂದ ಶೇ. 50 ವರೆಗೆ ಡಿಸ್ಕೌಂಟ್

Suddi Udaya
error: Content is protected !!