25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.22-24: ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ

ವೇಣೂರು: ಕರಿಮಣೇಲು, ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಜ.22 ರಿಂದ ಜ.24ರವರೆಗೆ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಶ್ರೀಪಾದ ಪಾಂಗಣ್ಣಾಯರ ನೇತೃತ್ವದಲ್ಲಿ ಚಂದ್ರಶೇಖರ ಅಸ್ರಣ್ಣರವರ ಪೌರೋಹಿತ್ಯದಲ್ಲಿ
ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಶ್ರೀ ದೈವ ಕೊಡಮಣಿತ್ತಾಯ ಮತ್ತು ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಸತೀಶ್ ಪೂಜಾರಿ ಚಿಗುರು ತಿಳಿಸಿದ್ದಾರೆ.

ಜ.22 ಬೆಳಿಗ್ಗೆ ನವಕ ಕಲಶಾಭಿಷೇಕ, ಗಣಹೋಮ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರಿಂದ
ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ. ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ , ಸಂಜೆ ಭಜನೆ, ರಾತ್ರಿ ರಂಗಪೂಜೆ, ನಿತ್ಯಬಲಿ ಉತ್ಸವ

ಜ.23 ಬೆಳಿಗ್ಗೆ ಶ್ರೀ ದೇವರಿಗೆ ಏಕಾದಶ ರುದ್ರಾಭಿಷೇಕ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ಮುಹೂರ್ತ ಕಂಭ, ಮಧ್ಯಾಹ್ನ ಗುರ್ಜಿ ಹಾಕುವುದು. ಸಂಜೆ ಗುತ್ತುಗಳಿಂದ ದೈವಗಳ ಭಂಡಾರ ಆಗಮನ., ರಾತ್ರಿ ನಿತ್ಯಬಲಿ, ಉತ್ಸವ. ಶ್ರೀ ದೈವ, ಶ್ರೀ ಕೊಡಮಣಿತ್ತಾಯ ನೇಮೋತ್ಸವ.

ಜ.24 ಬೆಳಿಗ್ಗೆ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ಧಾರ್ಮಿಕ ಸಭೆ, ರಾತ್ರಿ ರಂಗಪೂಜೆ, ಪರಿವಾರ ದೇವರುಗಳಿಗೆ ವಿಶೇಷ ಪೂಜೆ, ಉತ್ಸವ, ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ ನಡೆಯಲಿದೆ.

Related posts

ಉಜಿರೆ: ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!