September 6, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು. ದಿ. ವಸಂತ ಬಂಗೇರರವರ ಸಂಸ್ಥೆಯೊಂದಿಗಿನ ಒಡನಾಟ ಮತ್ತು ಶಾಲೆಯ ವಿಭಿನ್ನ ಸಾಮರ್ಥ್ಯದ ಮಕ್ಕಳ ಬಗೆಗಿನ ಅವಾರ ಕಾಳಜಿಯಿಂದಾಗಿ ಪ್ರತೀ ವರ್ಷವೂ ವಿಭಿನ್ನ ಕಾರ್ಯಕ್ರಮಗಳನ್ನು ಶಾಲೆಯ ಮಕ್ಕಳಿಗಾಗಿ ಅವರ ಹುಟ್ಟು ಹಬ್ಬ ಹಾಗೂ ಪುಣ್ಯಸ್ಮರಣೆಯ ಅಂಗವಾಗಿ ಅವರ ಕುಟುಂಬಸ್ಥರು ಆಚರಿಸುತ್ತಾ ಬಂದಿರುತ್ತಾರೆ.

ಈ ಬಾರಿಯೂ ಶ್ರೀಯುತರ 80 ನೇ ವರ್ಷದ ಹುಟ್ಟುಹಬ್ಬದ ಪರವಾಗಿ ಶಾಲೆಯ ವಿಭಿನ್ನ ಸಾಮರ್ಥ್ಯ ಹೊಂದಿರುವ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಶಾಲೆಯ ನಿರ್ದೇಶಕರು, ವಿಶೇಷ ಚೇತನ ಮಕ್ಕಳು ಹಾಗೂ ಸಿಬ್ಬಂದಿಗಳು ಶ್ರೀಯುತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲೆಂದು ಭಗವಂತನಲ್ಲಿ ಬೇಡುತ್ತಾ, ಅವರ ಕುಟುಂಬಸ್ಥರ ಈ ಉದಾತ್ತ ಹೃದಯಕ್ಕೆ ಹಾಗೂ ಶಾಲೆಯ ವಿಶೇಷ ಚೇತನ ಮಕ್ಕಳ ಪರ ಅವರು ತೋರುತ್ತಿರುವ ಅಕ್ಕರೆ, ವಾತ್ಸಲ್ಯಕ್ಕೆ ವಂದಿಸಿದರು.

ಶಾಲೆಯ 107 ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿಶೇಷ ಭೋಜನವನ್ನು ಸವಿದು, ದಿ. ವಸಂತ ಬಂಗೇರ ರವರ ಆತ್ಮದ ಚಿರಶಾಂತಿಗಾಗಿ ಹಾಗೂ ಅವರ ಕುಟುಂಬಸ್ಥರ ಉತ್ತಮ ಆಯುರಾರೋಗ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸಿದರು.

Related posts

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya

ಡಾ.ಎಸ್.ಡಿ ಶೆಟ್ಟಿ ನಿಧನಕ್ಕೆ ದ. ಕ.ಜಿಲ್ಲಾ ಕ.ಸಾ.ಪ ಸಂತಾಪ

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!