25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು. ದಿ. ವಸಂತ ಬಂಗೇರರವರ ಸಂಸ್ಥೆಯೊಂದಿಗಿನ ಒಡನಾಟ ಮತ್ತು ಶಾಲೆಯ ವಿಭಿನ್ನ ಸಾಮರ್ಥ್ಯದ ಮಕ್ಕಳ ಬಗೆಗಿನ ಅವಾರ ಕಾಳಜಿಯಿಂದಾಗಿ ಪ್ರತೀ ವರ್ಷವೂ ವಿಭಿನ್ನ ಕಾರ್ಯಕ್ರಮಗಳನ್ನು ಶಾಲೆಯ ಮಕ್ಕಳಿಗಾಗಿ ಅವರ ಹುಟ್ಟು ಹಬ್ಬ ಹಾಗೂ ಪುಣ್ಯಸ್ಮರಣೆಯ ಅಂಗವಾಗಿ ಅವರ ಕುಟುಂಬಸ್ಥರು ಆಚರಿಸುತ್ತಾ ಬಂದಿರುತ್ತಾರೆ.

ಈ ಬಾರಿಯೂ ಶ್ರೀಯುತರ 80 ನೇ ವರ್ಷದ ಹುಟ್ಟುಹಬ್ಬದ ಪರವಾಗಿ ಶಾಲೆಯ ವಿಭಿನ್ನ ಸಾಮರ್ಥ್ಯ ಹೊಂದಿರುವ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಶಾಲೆಯ ನಿರ್ದೇಶಕರು, ವಿಶೇಷ ಚೇತನ ಮಕ್ಕಳು ಹಾಗೂ ಸಿಬ್ಬಂದಿಗಳು ಶ್ರೀಯುತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲೆಂದು ಭಗವಂತನಲ್ಲಿ ಬೇಡುತ್ತಾ, ಅವರ ಕುಟುಂಬಸ್ಥರ ಈ ಉದಾತ್ತ ಹೃದಯಕ್ಕೆ ಹಾಗೂ ಶಾಲೆಯ ವಿಶೇಷ ಚೇತನ ಮಕ್ಕಳ ಪರ ಅವರು ತೋರುತ್ತಿರುವ ಅಕ್ಕರೆ, ವಾತ್ಸಲ್ಯಕ್ಕೆ ವಂದಿಸಿದರು.

ಶಾಲೆಯ 107 ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿಶೇಷ ಭೋಜನವನ್ನು ಸವಿದು, ದಿ. ವಸಂತ ಬಂಗೇರ ರವರ ಆತ್ಮದ ಚಿರಶಾಂತಿಗಾಗಿ ಹಾಗೂ ಅವರ ಕುಟುಂಬಸ್ಥರ ಉತ್ತಮ ಆಯುರಾರೋಗ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸಿದರು.

Related posts

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಕೊಕ್ಕಡ : ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಕರಿಮಣೇಲು ನಿವಾಸಿ ಶ್ರೀಮತಿ ಶಾಂತ ನಿಧನ

Suddi Udaya
error: Content is protected !!