22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

ಇಂದಬೆಟ್ಟು: ಬಂಗಾಡಿ ಅರಮನೆಯ ಹಿರಿಯರಾದ , ಬಾಂಗ್ವಾಡಿ ಬಂಗ ಅರಸರ ವಂಶಸ್ಥರಾದ ಶತಾಯುಷಿ ರವಿರಾಜ್ ಬಲ್ಲಾಳ್ (104ವ) ರವರು ಅಲ್ಪಕಾಲದ ಅಸೌಖ್ಯದಿಂದ ಜ.16 ರಂದು ವಿಧಿವಶರಾಗಿದ್ದಾರೆ.

ಬಂಗ ಅರಸರ ರಾಜಧಾನಿಯಾಗಿದ್ದ ಬಂಗಾಡಿಯ ಅರಮನೆಯನ್ನು ಕೆಲವೊಂದು ಮಾರ್ಪಾಡುಗಳನ್ನು ಮಾಡಿ ಇಂದಿಗೂ ರವಿರಾಜ ಬಲ್ಲಾಳ್ ಅವರು ಬಂಗಾಡಿ ಅರಮನೆಯನ್ನು ಸಂರಕ್ಷಿಸಿಕೊಂಡು ಬಂದಿದ್ದರು. ‘ಬಂಗರಸರ ಮೂಲ ಹಾಗೂ ಪರಿಚಯ, ಇವರ ಆಳ್ವಿಕೆಯಲ್ಲಿ ನಿರ್ಮಿಸಿದ ಶ್ರವಣಗುಂಡ, ಶಾಂತಿನಾಥ ಸ್ವಾಮಿಯ ಬಸದಿ, ಜೈನ ಅರಸರ ಕಾಲದಲ್ಲಿ ಇದ್ದ ಪದ್ಧತಿ, ದಕ್ಷಿಣ ಕನ್ನಡ ಜಿಲ್ಲೆಯನ್ನಾಲಿದ ಜೈನ ಅರಸರು, ಹೆಗ್ಗಡೆ ಹಾಗೂ ಬಲ್ಲಾಳರ ಸರ್ವಧರ್ಮದ ಕೊಡುಗೆ ಬಂಗರಸರ ಕಾಲದ ಕೆಲವು ಶಾಸನಗಳು ಶಾಸನದಲ್ಲಿರುವ ನೂನ್ಯತೆಯ ವಿವರ ಬಂಗರಸರ ವಂಶಾವಳಿ ಲಕ್ಷ್ಮಪ್ಪರಸ ಬಂಗರ ಸ್ವಾತಂತ್ರ್ಯ ಚಳುವಳಿಯ ಎಲ್ಲಾ ವಿವರವೂ ಲಕ್ಷ್ಮಪ್ಪ ಬಂಗರ ಸ್ವಾತಂತ್ರ್ಯ ಚಳುವಳಿಯ ಎಲ್ಲಾ ವಿವರಗಳನ್ನು ಬಿ.ರವಿರಾಜ್ ಬಲ್ಲಾಳರು ಸಂಶೋಧಿಸಿ ‘ ಬಂಗ ಅರಸರ ಇತಿಹಾಸ’ ಪುಸ್ತಕವನ್ನು ಬರೆದು ಅದರಲ್ಲಿ ದಾಖಲಿಸಿದ್ದಾರೆ. ಅಲ್ಲದೆ ಹಲವಾರು ಲೇಖನಗಳನ್ನು, ಬರಹಗಳನ್ನು ರವಿರಾಜ ಬಲ್ಲಾಳ್ ಅವರು ಬರೆದಿದ್ದಾರೆ.

ಮೃತರು ಇಬ್ಬರು ಪುತ್ರರಾದ ಯಶೋಧರ ಬಲ್ಲಾಳ್, ಅಜಿತ್ ಬಲ್ಲಾಳ್, ಪುತ್ರಿ ಜಯರತ್ನ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜಿಲ್ಲಾ ಸಾಹಿತ್ಯ ಸಮ್ಮೇಳನ: ಮಧೂರು ವಿಷ್ಣುಪ್ರಸಾದ ಕಲ್ಲೂರಾಯ ಮತ್ತು ಮಧೂರು ಮೋಹನ ಕಲ್ಲೂರಾಯರಿಂದ ಗಮಕ ವಾಚನ

Suddi Udaya

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya
error: Content is protected !!