25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಬೆಳ್ತಂಗಡಿ: ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗಾಢ ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿದ್ದಾರೆ.

ರವಿರಾಜ ಬಳ್ಳಾಲ್ ಧರ್ಮಾನುರಾಗಿಗಳಾಗಿದ್ದು ಬಂಗಾಡಿ ಬಸದಿಯನ್ನೇ ಅತಿಶಯ ಕ್ಷೇತ್ರವಾಗಿ ಬೆಳೆಸಿದರು. ಸದಾ ಸ್ವಾಧ್ಯಾಯ ನಿರತರಾಗಿದ್ದ ಅವರು ಧರ್ಮ, ಸಾಹಿತ್ಯ, ಕಲೆ, ಸಂಸ್ಕೃತಿ, ಆಧ್ಯಾತ್ಮಿಕ ಸಾಧನೆ ಬಗ್ಯೆ ಚಿಂತನ-ಮಂಥನ ನಡೆಸುತ್ತಿದ್ದರು.
ಬಂಗಾಡಿಯಲ್ಲಿ ಹಲವಾರು ಧರ್ಮಪ್ರಭಾವನಾ ಕಾರ್ಯಗಳನ್ನು ಹಮ್ಮಿಕೊಂಡಿದ್ದರು. ಕೃಷಿ, ತೋಟಗಾರಿಕೆಯಲ್ಲಿಯೂ ಅವರಿಗೆ ವಿಶೇಷ ಆಸಕ್ತಿ-ಅನುಭವ ಇತ್ತು.

ಧರ್ಮಸ್ಥಳದ ಪರಮ ಭಕ್ತರೂ, ಅಭಿಮಾನಿಯೂ ಆಗಿದ್ದ ಅವರು ಕ್ಷೇತ್ರದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು.
ಧರ್ಮಸ್ಥಳದ ಭವ್ಯ ಇತಿಹಾಸ ಮತ್ತು ಪರಂಪರೆ ಬಗ್ಗೆ ಅವರು ಅಮೂಲ್ಯ ಕೃತಿಯೊಂದನ್ನೂ ರಚಿಸಿದ್ದರು.

Related posts

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಡಿ.20: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya
error: Content is protected !!