23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಲಕ್ಕೀ ಸ್ಕೀಂ ಬಂಪರ್ ಡ್ರಾ

ಬೆಳ್ತಂಗಡಿ: ಕಳೆದ 10 ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತ ಬರುತ್ತಿರುವ ಶೀತಲ್ ಜೈನ್ ಮಾಲಕತ್ವದ ಪವರ್ ಆನ್ ಸಂಸ್ಥೆಯು ದಶಕದ ಸಂಭ್ರಮಾಚರಣೆಯಲ್ಲಿ ಲಕ್ಕೀ ಸ್ಕೀಂ ನ ಕೊನೆಯ ಬಂಪರ್ ಡ್ರಾ ದಲ್ಲಿ ಬಳಂಜ ಸ್ಮಯ ಎಸ್ ಕೋಟ್ಯಾನ್ ರವರಿಗೆ ಸ್ಕೂಟಿ ಬಂಪರ್ ಬಹುಮಾನ ಲಭಿಸಿದೆ.

ಕಾರ್ಯಕ್ರಮದ ಮುಖ್ಯ ಅತಿಥಿ ಅಳದಂಗಡಿ ಸೊಸೈಟಿ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಮಾತನಾಡಿ ನಗುಮೊಗದ ಸೇವೆ ಹಾಗೂ ಗುಣಮಟ್ಟದ ವಸ್ತುಗಳ ಪೂರೈಕೆಯಿಂದ ಪವರ್ ಆನ್ ಸಂಸ್ಥೆಯು ಬೆಳೆದಿದೆ ಎಂದರು.

ಸಂಸ್ಥೆಯ ಮಾಲಕ ಶೀತಲ್ ಜೈನ್ ನಿರಂತರ ಸಹಕಾರ ನೀಡುತ್ತಿರುವ ಗ್ರಾಹಕ ಮಿತ್ರರಿಗೆ ಕೃತಜ್ಞತೆ ಅರ್ಪಿಸಿದರು. ಬಂಪರ್ ಬಹುಮಾನವನ್ನು ಸಂಸ್ಥೆಯ ಮಾಲಕ ಶೀತಲ್ ಜೈನ್ ಮತ್ತು ಸಿಬ್ಬಂದಿಗಳು ಸ್ಮಯ ಎಸ್ ಕೋಟ್ಯಾನ್, ಅಮೃತಾ ಎಸ್ ಕೋಟ್ಯಾನ್, ಸಂತೋಷ್ ಪಿ ಕೋಟ್ಯಾನ್ ಬಳಂಜರವರಿಗೆ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಪವರ್ ಅಸನ್ ಸಂಸ್ಥೆಯ ಸಿಬ್ಬಂದಿಗಳ ಹೆತ್ತವರನ್ನು ಆಹ್ವಾನಿಸಿ, ಅವರಿಗೆ ಫಲಪುಷ್ಪ ನೀಡಿ, ಶಾಲು ಹಾಕಿ, ಉಡುಗೊರೆ ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ಬಿಲ್ಡಿಂಗ್ ಮಾಲಕರಾದ ರಾಮ್ ದಾಸ್ ಪೈ,ಪ್ರಗತಿಪರ ಕೃಷಿಕರಾದ ಪಾರ್ಶ್ವನಾಥ ಜೈನ್, ಅಯಾನ್ಶ ಮೊಬೈಲ್ ಮಾಲಕ ಅರಿಹಂತ್ ಜೈನ್ ಉಪಸ್ಥಿತರಿದ್ದರು.

ಉತ್ತಮ ಗುಣಮಟ್ಟದ ವಸ್ತುಗಳ ಪೂರೈಕೆಯೊಂದಿಗೆ ಜನರ ಪ್ರೀತಿ ವಿಶ್ವಾಸ ಗಳಿಸಿದ ಸಂಸ್ಥೆಯಾಗಿದೆ.ಇದೀಗ ದಶಕದ ಸಂಭ್ರಮವನ್ನು ಸಂಸ್ಥೆಯ ಮಾಲಕರು ಹಾಗೂ ಸಿಬ್ಬಂದಿಗಳು ಒಟ್ಟಾಗಿ ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿದರು. ಗ್ರಾಹಕರು ಪವರ್ ಆನ್ ಸಂಸ್ಥೆಗೆ ಆಗಮಿಸಿ ಶುಭಾಶಯ ಸಲ್ಲಿಸಿದರು.

ಪವರ್ ಆನ್ ಸಂಸ್ಥೆಯ ಸುಧೀರ್ ಜೈನ್ ಸ್ವಾಗತಿಸಿ, ಕೀರ್ತಿ ಎಸ್ ನಿರೂಪಿಸಿ, ಮಾನಸ ಶೀತಲ್ ಜೈನ್ ವಂದಿಸಿದರು.

Related posts

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಗೌರವಾರ್ಪಣೆ

Suddi Udaya

ಬಂದಾರು : ಶಿವ ಫ್ರೆಂಡ್ಸ್ ಕುರಾಯ-ಖಂಡಿಗ ಮೈರೋಳ್ತಡ್ಕ – ಬಂದಾರು ಆಶ್ರಯದಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ತ್ರೋಬಾಲ್ ಮತ್ತು ಮುಕ್ತ ಹಗ್ಗಜಗ್ಗಾಟ ಸ್ಪರ್ಧೆ

Suddi Udaya
error: Content is protected !!