July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಶೀಟು ಕಾಯರ್ತೋಡಿ ರಸ್ತೆಯಲ್ಲಿ ಶಾಲೆಗೆ ಸೈಕಲಿನಲ್ಲಿ ಬರುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಸಡನ್‌ಆಗಿ ಚಿರತೆ ಎದುರಾಗಿದ್ದು, ಭಯಗೊಂಡ ಬಾಲಕ ತಕ್ಷಣ ಸೈಕಲ್ ಹಿಂದಕ್ಕೆ ತಿರುಗಿಸಿ ವೇಗವಾಗಿ ಮನೆಗೆ ಹೋಗಿ ಅಪಾಯದಿಂದ ಪಾರಾದ ಘಟನೆ ಜ.16 ರಂದು ಬೆಳಿಗ್ಗೆ ನಡೆದಿದೆ.

ಮುಂಡಾಜೆ ಪ್ರೌಢ ಶಾಲೆಯಲ್ಲಿ 10 ನೇ ತರಗತಿಯಲ್ಲಿ ಕಲಿಯುತ್ತಿರುವ, ಕಲ್ಮಂಜ ಗ್ರಾಮದ ಜ್ಞಾನೇಶ ತನ್ನ ಸಮಯ ಪ್ರಜ್ಞೆಯಿಂದ ಜೀವಪಾಯದಿಂದ ಪಾರಾದ ವಿದ್ಯಾರ್ಥಿಯಾಗಿದ್ದಾನೆ. ಮುಂಡಾಜೆ ಗ್ರಾಮದ ಶೀಟು ಕಾರ್ಯರ್ತೋಡಿ ರಸ್ತೆಯಲ್ಲಿ ಮೂರು ಮಾರ್ಗ ಎಂಬಲ್ಲಿ ಇಂದು ಬೆಳಿಗ್ಗೆ 7.30ರ ಸಮಯ ಶಾಲಾ ಬಾಲಕ ಜ್ಞಾನೇಶ ಶಾಲೆಗೆ ತನ್ನ ಸೈಕಲ್‌ನಲ್ಲಿ ಬರುತ್ತಿದ್ದ ವೇಳೆ ಕಾಡಿನಿಂದ ರಸ್ತೆಗೆ ಇಳಿದ ಚಿರತೆ ಎದುರಾಗಿದೆ. ಚಿರತೆ ಒಮ್ಮೆಲೇ ಎದುರಿಗೆ ಬಂದದನ್ನು ನೋಡಿ ಹೆದರಿ, ಭೀತಿಗೊಂಡ ಬಾಲಕ ತಮ್ಮ ಸಮಯ ಪ್ರಜ್ಞೆಯಿಂದ ಸೈಕಲ್‌ನ್ನು ತಕ್ಷಣ ಹಿಂದಕ್ಕೆ ತಿರುಗಿಸಿ, ವೇಗವಾಗಿ ಮನೆಗೆ ಬಂದು ಅಪಾಯದಿಂದ ಪಾರಾಗಿದ್ದಾನೆ.


ಕಡಿರುದ್ಯಾವರದಲ್ಲಿ ಪ್ರತ್ಯಕ್ಷಗೊಂಡ ನಾಲ್ಕು ಚಿರತೆ:

ಇಂದು ಬೆಳಿಗ್ಗೆ ಕಡಿರುದ್ಯಾವರ ಗ್ರಾಮದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷಗೊಂಡಿದೆ. ಕಡಿರುದ್ಯಾವರ ಗ್ರಾಮದ ಕಾರ್ನಪ ಎಂಬಲ್ಲಿ ನಾಲ್ಕು ಚಿರತೆಗಳು ಸ್ಥಳೀಯರಿಗೆ ಕಂಡು ಬಂದಿದೆ. ಸ್ಥಳೀಯ ಕಾಡಿನಿಂದ ನಾಡಿಗೆ ಇಳಿದು ಬಂದಿದ್ದು, ನಾಗರಿಕರಲ್ಲಿ ಆಂತಕ ಸೃಷ್ಟಿಸಿದೆ. ಕಳೆದ ನಾಲ್ಕು ದಿನಗಳ ಹಿಂದೆ ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಇವರ ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಕಂಡು ಬಂದಿತ್ತು. ರಬ್ಬರ್ ತೋಟಕ್ಕೆ ಬೆಳಗ್ಗಿನ ಜಾವ ಟ್ಯಾಪಿಂಗ್‌ಗೆ ಕಾರ್ಮಿಕರು ಹೋದಾಗ ಚಿರತೆಗಳು ಕಂಡು ಬಂದಿತ್ತು. ಒಂದು ದೊಡ್ಡ ಚಿರತೆಯ ಜೊತೆ ಮೂರು ಮರಿ ಚಿರತೆಗಳು ಇದ್ದವು. ಚಾರ್ಮಾಡಿ, ಮುಂಡಾಜೆ, ಕಡಿರುದ್ಯಾವರ, ಮಿತ್ತಬಾಗಿಲು ಪರಿಸರದ ಕಾಡಿನಲ್ಲಿ ಇವು ಓಡಾಟ ನಡೆಸುತ್ತಿದ್ದು, ಜನರು ಜಾಗೃತೆ ವಹಿಸಬೇಕಾಗಿದೆ. ಅರಣ್ಯ ಇಲಾಖೆ ಇದವರ ಬಗ್ಗೆ ತಕ್ಷಣ ಕ್ರಮ ವಹಿಸುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಅಂಡಿಂಜೆ: ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಬಳಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Suddi Udaya
error: Content is protected !!