22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು: ಹಿಂದೂ ಸಮಾಜದಲ್ಲಿ ಶಾಂತಿ, ಸಾಮರಸ್ಯ, ಏಕತೆ, ಸಾಂಸ್ಕೃತಿಕ ಜಾಗೃತಿಯನ್ನು ಬಲಪಡಿಸುವ ಉದ್ದೇಶದಿಂದ ರಾಷ್ಟ್ರದಾದ್ಯಂತ ಹಿಂದೂ ಸಂಗಮ ಕಾರ್ಯಕ್ರಮ ನಡೆಯುತ್ತಿದೆ. ಹಿಂದೂ ಸಂಗಮ ಆಯೋಜನ ಸಮಿತಿ ವೇಣೂರು ತಾಲೂಕು, ವೇಣೂರು ಮಂಡಲದ ಸಂಯೋಜನೆಯಲ್ಲಿ ಜ.31 ರಂದು ಸಂಜೆ 3 ಗಂಟೆಗೆ ವೇಣೂರು ಶ್ರೀರಾಮ ಭಜನಾ ಮಂದಿರದಿಂದ ಶ್ರೀಮಹಾಲಿಂಗೇಶ್ವರ ದೇವಸ್ಥಾನದವರೆಗೆ ಬೃಹತ್ ಶೋಭಾಯಾತ್ರೆಯೊಂದಿಗೆ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಿಂದೂ ಸಂಗಮದ ಸಭಾ ಕಾರ್ಯಕ್ರಮ ನಡೆಯಲಿದೆ.


ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ಪೂಜೆ ಪ್ರಾರ್ಥನೆ ಸಲ್ಲಿಸಿ ವೇಣೂರು ಹಿಂದೂ ಸಂಗಮದ ಸಂಚಾಲಕ ಪುರುಷೋತ್ತಮ ರಾವ್ ಬಿಡುಗಡೆ ಮಾಡಿದರು. ಹಿಂದೂ ಸಂಗಮ ಕಾರ್ಯಕ್ರಮದ ಅಧ್ಯಕ್ಷ ಶ್ರವಣ್ ಕೆ. ಮಿತ್ತೋಟ್ಟು ಕರಿಮಣೇಲು, ವೇಣೂರು ತಾಲೂಕು ಹಿಂದೂ ಸಂಗಮ ಆಯೋಜನ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯ ಗೌಡ ವೇಣೂರು, ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರಾದ ನೇಮಯ್ಯ ಕುಲಾಲ್, ಪಂಚಾಯತ್ ಸದಸ್ಯ ಉಮೇಶ ನಡ್ತಿಕಲ್ಲು, ಶ್ರೀನಿಧಿ ಶಾಮಿಯಾನದ ಮಾಲಕರಾದ ಜಗದೀಶ ಭಟ್, ಉದ್ಯಮಿ ರಾಜೇಶ ಕೊಪ್ಪದಬಾಕಿಮಾರು, ಕಾಶೀನಾಥ ಹೆಗ್ಡೆ ಬಜಿರೆ, ಪ್ರವೀಣ ಕುಮಾರ್ LIC, ರಾಮದಾಸ ನಾಯಕ್ ಕರಿಮಣೇಲು, ನಿರ್ಮಲ್ ಪೈ ವೇಣೂರು, ದಯಾನಂದ ಭಂಡಾರಿ ಕರಿಮಣೇಲು, ಜಯರಾಮ ಆಚಾರ್ಯ ಕಾಂಜರಕಟ್ಟೆ, ಹರೀಶ ಕಾಂಜರಕಟ್ಟೆ, ಸೋಮನಾಥ ಕೆ.ವಿ, ಉಮೇಶ ವೇಣೂರು, ದಿನೇಶ ವೇಣೂರು, ಸಂಯೋಜಕ ಪ್ರಕಾಶ ಪುರೋಹಿತ್ ವೇಣೂರು ಮೊದಲಾದವರು ಉಪಸ್ಥಿತರಿದ್ದರು.

Related posts

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ಕಲ್ಮಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya
error: Content is protected !!