September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು: ಹಿಂದೂ ಸಮಾಜದಲ್ಲಿ ಶಾಂತಿ, ಸಾಮರಸ್ಯ, ಏಕತೆ, ಸಾಂಸ್ಕೃತಿಕ ಜಾಗೃತಿಯನ್ನು ಬಲಪಡಿಸುವ ಉದ್ದೇಶದಿಂದ ರಾಷ್ಟ್ರದಾದ್ಯಂತ ಹಿಂದೂ ಸಂಗಮ ಕಾರ್ಯಕ್ರಮ ನಡೆಯುತ್ತಿದೆ. ಹಿಂದೂ ಸಂಗಮ ಆಯೋಜನ ಸಮಿತಿ ವೇಣೂರು ತಾಲೂಕು, ವೇಣೂರು ಮಂಡಲದ ಸಂಯೋಜನೆಯಲ್ಲಿ ಜ.31 ರಂದು ಸಂಜೆ 3 ಗಂಟೆಗೆ ವೇಣೂರು ಶ್ರೀರಾಮ ಭಜನಾ ಮಂದಿರದಿಂದ ಶ್ರೀಮಹಾಲಿಂಗೇಶ್ವರ ದೇವಸ್ಥಾನದವರೆಗೆ ಬೃಹತ್ ಶೋಭಾಯಾತ್ರೆಯೊಂದಿಗೆ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಿಂದೂ ಸಂಗಮದ ಸಭಾ ಕಾರ್ಯಕ್ರಮ ನಡೆಯಲಿದೆ.


ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ಪೂಜೆ ಪ್ರಾರ್ಥನೆ ಸಲ್ಲಿಸಿ ವೇಣೂರು ಹಿಂದೂ ಸಂಗಮದ ಸಂಚಾಲಕ ಪುರುಷೋತ್ತಮ ರಾವ್ ಬಿಡುಗಡೆ ಮಾಡಿದರು. ಹಿಂದೂ ಸಂಗಮ ಕಾರ್ಯಕ್ರಮದ ಅಧ್ಯಕ್ಷ ಶ್ರವಣ್ ಕೆ. ಮಿತ್ತೋಟ್ಟು ಕರಿಮಣೇಲು, ವೇಣೂರು ತಾಲೂಕು ಹಿಂದೂ ಸಂಗಮ ಆಯೋಜನ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯ ಗೌಡ ವೇಣೂರು, ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರಾದ ನೇಮಯ್ಯ ಕುಲಾಲ್, ಪಂಚಾಯತ್ ಸದಸ್ಯ ಉಮೇಶ ನಡ್ತಿಕಲ್ಲು, ಶ್ರೀನಿಧಿ ಶಾಮಿಯಾನದ ಮಾಲಕರಾದ ಜಗದೀಶ ಭಟ್, ಉದ್ಯಮಿ ರಾಜೇಶ ಕೊಪ್ಪದಬಾಕಿಮಾರು, ಕಾಶೀನಾಥ ಹೆಗ್ಡೆ ಬಜಿರೆ, ಪ್ರವೀಣ ಕುಮಾರ್ LIC, ರಾಮದಾಸ ನಾಯಕ್ ಕರಿಮಣೇಲು, ನಿರ್ಮಲ್ ಪೈ ವೇಣೂರು, ದಯಾನಂದ ಭಂಡಾರಿ ಕರಿಮಣೇಲು, ಜಯರಾಮ ಆಚಾರ್ಯ ಕಾಂಜರಕಟ್ಟೆ, ಹರೀಶ ಕಾಂಜರಕಟ್ಟೆ, ಸೋಮನಾಥ ಕೆ.ವಿ, ಉಮೇಶ ವೇಣೂರು, ದಿನೇಶ ವೇಣೂರು, ಸಂಯೋಜಕ ಪ್ರಕಾಶ ಪುರೋಹಿತ್ ವೇಣೂರು ಮೊದಲಾದವರು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

27 ನೇ ವರ್ಷದ ಭಜನಾ ಕಮ್ಮಟ: ಆಧ್ಯಾತ್ಮಿಕ ಕಮ್ಮಟಗಳು ಭಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆ:ಅನಿಲ್ ಕುಮಾರ್

Suddi Udaya

ಕಡಿರುದ್ಯಾವರ: ಹೇಡ್ಯದಲ್ಲಿ ಪಿಕಪ್ ಮತ್ತು ಕಾರು ಡಿಕ್ಕಿ

Suddi Udaya

ಕಡಿರುದ್ಯಾವರ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿ ಹೊಲಿಗೆ ತರಬೇತಿ ಉದ್ಘಾಟನೆ

Suddi Udaya

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya
error: Content is protected !!