25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು: ಹಿಂದೂ ಸಮಾಜದಲ್ಲಿ ಶಾಂತಿ, ಸಾಮರಸ್ಯ, ಏಕತೆ, ಸಾಂಸ್ಕೃತಿಕ ಜಾಗೃತಿಯನ್ನು ಬಲಪಡಿಸುವ ಉದ್ದೇಶದಿಂದ ರಾಷ್ಟ್ರದಾದ್ಯಂತ ಹಿಂದೂ ಸಂಗಮ ಕಾರ್ಯಕ್ರಮ ನಡೆಯುತ್ತಿದೆ. ಹಿಂದೂ ಸಂಗಮ ಆಯೋಜನ ಸಮಿತಿ ವೇಣೂರು ತಾಲೂಕು, ವೇಣೂರು ಮಂಡಲದ ಸಂಯೋಜನೆಯಲ್ಲಿ ಜ.31 ರಂದು ಸಂಜೆ 3 ಗಂಟೆಗೆ ವೇಣೂರು ಶ್ರೀರಾಮ ಭಜನಾ ಮಂದಿರದಿಂದ ಶ್ರೀಮಹಾಲಿಂಗೇಶ್ವರ ದೇವಸ್ಥಾನದವರೆಗೆ ಬೃಹತ್ ಶೋಭಾಯಾತ್ರೆಯೊಂದಿಗೆ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಿಂದೂ ಸಂಗಮದ ಸಭಾ ಕಾರ್ಯಕ್ರಮ ನಡೆಯಲಿದೆ.


ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ಪೂಜೆ ಪ್ರಾರ್ಥನೆ ಸಲ್ಲಿಸಿ ವೇಣೂರು ಹಿಂದೂ ಸಂಗಮದ ಸಂಚಾಲಕ ಪುರುಷೋತ್ತಮ ರಾವ್ ಬಿಡುಗಡೆ ಮಾಡಿದರು. ಹಿಂದೂ ಸಂಗಮ ಕಾರ್ಯಕ್ರಮದ ಅಧ್ಯಕ್ಷ ಶ್ರವಣ್ ಕೆ. ಮಿತ್ತೋಟ್ಟು ಕರಿಮಣೇಲು, ವೇಣೂರು ತಾಲೂಕು ಹಿಂದೂ ಸಂಗಮ ಆಯೋಜನ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯ ಗೌಡ ವೇಣೂರು, ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರಾದ ನೇಮಯ್ಯ ಕುಲಾಲ್, ಪಂಚಾಯತ್ ಸದಸ್ಯ ಉಮೇಶ ನಡ್ತಿಕಲ್ಲು, ಶ್ರೀನಿಧಿ ಶಾಮಿಯಾನದ ಮಾಲಕರಾದ ಜಗದೀಶ ಭಟ್, ಉದ್ಯಮಿ ರಾಜೇಶ ಕೊಪ್ಪದಬಾಕಿಮಾರು, ಕಾಶೀನಾಥ ಹೆಗ್ಡೆ ಬಜಿರೆ, ಪ್ರವೀಣ ಕುಮಾರ್ LIC, ರಾಮದಾಸ ನಾಯಕ್ ಕರಿಮಣೇಲು, ನಿರ್ಮಲ್ ಪೈ ವೇಣೂರು, ದಯಾನಂದ ಭಂಡಾರಿ ಕರಿಮಣೇಲು, ಜಯರಾಮ ಆಚಾರ್ಯ ಕಾಂಜರಕಟ್ಟೆ, ಹರೀಶ ಕಾಂಜರಕಟ್ಟೆ, ಸೋಮನಾಥ ಕೆ.ವಿ, ಉಮೇಶ ವೇಣೂರು, ದಿನೇಶ ವೇಣೂರು, ಸಂಯೋಜಕ ಪ್ರಕಾಶ ಪುರೋಹಿತ್ ವೇಣೂರು ಮೊದಲಾದವರು ಉಪಸ್ಥಿತರಿದ್ದರು.

Related posts

ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

Suddi Udaya

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

Suddi Udaya

ರೆಖ್ಯ : ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಮನೆ

Suddi Udaya
error: Content is protected !!