ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಗುರುವಾಯನಕರೆ ಇಲ್ಲಿ ಪ್ರತೀ ಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಫೆ. 6 ರಿಂದ 14 ರ ವರೆಗೆ ನಡೆಯಲಿದ್ದು, ಜ.16ರಂದು ಪೋಸ್ಟರ್ ಬಿಡುಗಡೆಗೊಳಿಸಲಾಯಿತು.

ಸುನ್ನೀ ಸಂಯುಕ್ತ ಜಮಾಅತ್ ಖಾಝಿ, ಇಂಡಿಯನ್ ಗ್ರ್ಯಾಂಡ್ ಮುಫ್ತಿ, ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅವರ ನೇತೃತ್ವದಲ್ಲಿ, ದರ್ಗಾ ಸಮಿತಿ ಅಧ್ಯಕ್ಷ ಅಬ್ದುಲ್ ರಹಿಮಾನ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರತಿದಿನ ರಾತ್ರಿ ಕರ್ನಾಟಕ, ಕೇರಳದ ಪ್ರಮುಖ ಧಾರ್ಮಿಕ ವಿದ್ವಾಂಸರಿಂದ ಉಪನ್ಯಾಸ ಮಾಲಿಕೆಗಳು ನಡೆಯಲಿದೆ.


ಉರೂಸ್ ಪ್ರಯುಕ್ತ ದಾನಿಗಳ‌ ನೆರವಿನಿಂದ ನಡೆಸಿಕೊಂಡು ಬರುತ್ತಿರುವ ಸಾಮೂಹಿಕ ವಿವಾಹ ಸಮಾರಂಭ ಫೆ. 8.ರಂದು ನಡೆಯಲಿದೆ. ಇದರಲ್ಲಿ‌ ದಾಂಪತ್ಯ ಜೀವನಕ್ಕೆ ಕಾಲಿರಿಸುವ ವಧುಗಳಿಗೆ ಚಿನ್ನಾಭರಣ, ವಸ್ರ್ತ, ವರ ರಿಗೆ ವಸ್ರ್ತ ಹಾಗೂ ವಾಚ್ ಕೊಡುಗೆಯಾಗಿ ನೀಡಲಾಗುವುದು.

ಫೆ.12 ರಂದು ಶಹೀದೈನಿ ಮಾಲೆ ಆಲಾಪನೆ ಹಾಗೂ ವಿವರಣೆ ನಡೆಯಲಿದೆ. ಅದೇ ದಿನ ರಾತ್ರಿ ವಾರ್ಷಿಕ್ ದಿಕ್ರ್ ಹಲ್ಖಾ ಮಜ್ಲಿಸ್ ನಡೆಯಲಿದೆ. ಫೆ.14 ರಂದು ಖತ್ಮುಲ್ ಕುರ್‌ಆನ್, ರಾತ್ರಿ ಉರೂಸ್ ಸಮಾರೋಪ ನಡೆಯಲಿದೆ. ಸಯ್ಯಿದ್ ಕುಂಬೋಳ್ ತಂಙಳ್, ಸಯ್ಯಿದ್ ಸಾದಾತ್ ತಂಙಳ್, ಸಯ್ಯಿದ್ ಕಾಜೂರು ತಂಙಳ್, ಸಯ್ಯಿದ್ ವಾದಿ ಇರ್ಫಾನ್ ತಂಙಳ್, ಸಯ್ಯಿದ್ ಮನ್ಶರ್ ತಂಙಳ್, ಸಯ್ಯಿದ್ ದಾರುಸ್ಸಲಾಂ ತಂಙಳ್, ಸಯ್ಯಿದ್ ಮಸ್‌ಊದ್ ತಂಙಳ್ ಕೂರತ್ ಮೊದಲಾದವರಲ್ಲದೆ ವಿವಿಧ ದಿನಗಳಲ್ಲಿ ಅನೇಕ ಮಂದಿ ಧಾರ್ಮಿಕ ವಿದ್ವಾಂಸರುಗಳು,‌ ಸಾಮಾಜಿಕ ಕ್ಷೇತ್ರದ ಗಣ್ಯರುಗಳು ಭಾಗವಹಿಸಲಿದ್ದಾರೆ.

ಪೋಸ್ಟರ್ ಬಿಡುಗಡೆಯ ಸಂದರ್ಭ ಖತೀಬ್ ಅಬ್ದುಲ್ ಬಾರಿ ಸ‌ಅದಿ, ಜಮಾಅತ್ ಅಧ್ಯಕ್ಷ ಯಾಕೂಬ್ ಮುಸ್ಲಿಯಾರ್ ಸಹಿತ ಉರೂಸ್ ಸಮಿತಿ ಹಾಗೂ ಆಡಳಿತ ಸಮಿತಿ ಪದಾಧಿಕಾರಿಗಳು, ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳು, ಜಮಾಅತ್ ಬಾಂಧವರು ಉಪಸ್ಥಿತರಿದ್ದರು.

Related posts

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಜೂನಿಯರ್ ಜೆಸಿ ವಿಭಾಗಕ್ಕೆ ಯುವ ಪುರಸ್ಕಾರ ಪ್ರಶಸ್ತಿ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

Suddi Udaya
error: Content is protected !!