25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

ಇಂದಬೆಟ್ಟು: ಬಂಗಾಡಿ ಅರಮನೆಯ ಹಿರಿಯರಾದ , ಬಾಂಗ್ವಾಡಿ ಬಂಗ ಅರಸರ ವಂಶಸ್ಥರಾದ ಶತಾಯುಷಿ ರವಿರಾಜ್ ಬಲ್ಲಾಳ್ (104ವ) ರವರು ಅಲ್ಪಕಾಲದ ಅಸೌಖ್ಯದಿಂದ ಜ.16 ರಂದು ವಿಧಿವಶರಾಗಿದ್ದಾರೆ.

ಬಂಗ ಅರಸರ ರಾಜಧಾನಿಯಾಗಿದ್ದ ಬಂಗಾಡಿಯ ಅರಮನೆಯನ್ನು ಕೆಲವೊಂದು ಮಾರ್ಪಾಡುಗಳನ್ನು ಮಾಡಿ ಇಂದಿಗೂ ರವಿರಾಜ ಬಲ್ಲಾಳ್ ಅವರು ಬಂಗಾಡಿ ಅರಮನೆಯನ್ನು ಸಂರಕ್ಷಿಸಿಕೊಂಡು ಬಂದಿದ್ದರು. ‘ಬಂಗರಸರ ಮೂಲ ಹಾಗೂ ಪರಿಚಯ, ಇವರ ಆಳ್ವಿಕೆಯಲ್ಲಿ ನಿರ್ಮಿಸಿದ ಶ್ರವಣಗುಂಡ, ಶಾಂತಿನಾಥ ಸ್ವಾಮಿಯ ಬಸದಿ, ಜೈನ ಅರಸರ ಕಾಲದಲ್ಲಿ ಇದ್ದ ಪದ್ಧತಿ, ದಕ್ಷಿಣ ಕನ್ನಡ ಜಿಲ್ಲೆಯನ್ನಾಲಿದ ಜೈನ ಅರಸರು, ಹೆಗ್ಗಡೆ ಹಾಗೂ ಬಲ್ಲಾಳರ ಸರ್ವಧರ್ಮದ ಕೊಡುಗೆ ಬಂಗರಸರ ಕಾಲದ ಕೆಲವು ಶಾಸನಗಳು ಶಾಸನದಲ್ಲಿರುವ ನೂನ್ಯತೆಯ ವಿವರ ಬಂಗರಸರ ವಂಶಾವಳಿ ಲಕ್ಷ್ಮಪ್ಪರಸ ಬಂಗರ ಸ್ವಾತಂತ್ರ್ಯ ಚಳುವಳಿಯ ಎಲ್ಲಾ ವಿವರವೂ ಲಕ್ಷ್ಮಪ್ಪ ಬಂಗರ ಸ್ವಾತಂತ್ರ್ಯ ಚಳುವಳಿಯ ಎಲ್ಲಾ ವಿವರಗಳನ್ನು ಬಿ.ರವಿರಾಜ್ ಬಲ್ಲಾಳರು ಸಂಶೋಧಿಸಿ ‘ ಬಂಗ ಅರಸರ ಇತಿಹಾಸ’ ಪುಸ್ತಕವನ್ನು ಬರೆದು ಅದರಲ್ಲಿ ದಾಖಲಿಸಿದ್ದಾರೆ. ಅಲ್ಲದೆ ಹಲವಾರು ಲೇಖನಗಳನ್ನು, ಬರಹಗಳನ್ನು ರವಿರಾಜ ಬಲ್ಲಾಳ್ ಅವರು ಬರೆದಿದ್ದಾರೆ.

ಮೃತರು ಇಬ್ಬರು ಪುತ್ರರಾದ ಯಶೋಧರ ಬಲ್ಲಾಳ್, ಅಜಿತ್ ಬಲ್ಲಾಳ್, ಪುತ್ರಿ ಜಯರತ್ನ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!