22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

ಇಂದಬೆಟ್ಟು: ಬಂಗಾಡಿ ಅರಮನೆಯ ಹಿರಿಯರಾದ , ಬಾಂಗ್ವಾಡಿ ಬಂಗ ಅರಸರ ವಂಶಸ್ಥರಾದ ಶತಾಯುಷಿ ರವಿರಾಜ್ ಬಲ್ಲಾಳ್ (104ವ) ರವರು ಅಲ್ಪಕಾಲದ ಅಸೌಖ್ಯದಿಂದ ಜ.16 ರಂದು ವಿಧಿವಶರಾಗಿದ್ದಾರೆ.

ಬಂಗ ಅರಸರ ರಾಜಧಾನಿಯಾಗಿದ್ದ ಬಂಗಾಡಿಯ ಅರಮನೆಯನ್ನು ಕೆಲವೊಂದು ಮಾರ್ಪಾಡುಗಳನ್ನು ಮಾಡಿ ಇಂದಿಗೂ ರವಿರಾಜ ಬಲ್ಲಾಳ್ ಅವರು ಬಂಗಾಡಿ ಅರಮನೆಯನ್ನು ಸಂರಕ್ಷಿಸಿಕೊಂಡು ಬಂದಿದ್ದರು. ‘ಬಂಗರಸರ ಮೂಲ ಹಾಗೂ ಪರಿಚಯ, ಇವರ ಆಳ್ವಿಕೆಯಲ್ಲಿ ನಿರ್ಮಿಸಿದ ಶ್ರವಣಗುಂಡ, ಶಾಂತಿನಾಥ ಸ್ವಾಮಿಯ ಬಸದಿ, ಜೈನ ಅರಸರ ಕಾಲದಲ್ಲಿ ಇದ್ದ ಪದ್ಧತಿ, ದಕ್ಷಿಣ ಕನ್ನಡ ಜಿಲ್ಲೆಯನ್ನಾಲಿದ ಜೈನ ಅರಸರು, ಹೆಗ್ಗಡೆ ಹಾಗೂ ಬಲ್ಲಾಳರ ಸರ್ವಧರ್ಮದ ಕೊಡುಗೆ ಬಂಗರಸರ ಕಾಲದ ಕೆಲವು ಶಾಸನಗಳು ಶಾಸನದಲ್ಲಿರುವ ನೂನ್ಯತೆಯ ವಿವರ ಬಂಗರಸರ ವಂಶಾವಳಿ ಲಕ್ಷ್ಮಪ್ಪರಸ ಬಂಗರ ಸ್ವಾತಂತ್ರ್ಯ ಚಳುವಳಿಯ ಎಲ್ಲಾ ವಿವರವೂ ಲಕ್ಷ್ಮಪ್ಪ ಬಂಗರ ಸ್ವಾತಂತ್ರ್ಯ ಚಳುವಳಿಯ ಎಲ್ಲಾ ವಿವರಗಳನ್ನು ಬಿ.ರವಿರಾಜ್ ಬಲ್ಲಾಳರು ಸಂಶೋಧಿಸಿ ‘ ಬಂಗ ಅರಸರ ಇತಿಹಾಸ’ ಪುಸ್ತಕವನ್ನು ಬರೆದು ಅದರಲ್ಲಿ ದಾಖಲಿಸಿದ್ದಾರೆ. ಅಲ್ಲದೆ ಹಲವಾರು ಲೇಖನಗಳನ್ನು, ಬರಹಗಳನ್ನು ರವಿರಾಜ ಬಲ್ಲಾಳ್ ಅವರು ಬರೆದಿದ್ದಾರೆ.

ಮೃತರು ಇಬ್ಬರು ಪುತ್ರರಾದ ಯಶೋಧರ ಬಲ್ಲಾಳ್, ಅಜಿತ್ ಬಲ್ಲಾಳ್, ಪುತ್ರಿ ಜಯರತ್ನ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪತ್ರಕರ್ತ, ಭುವನೇಶ್ ಗೇರುಕಟ್ಟೆ ರವರಿಗೆ ಮಾತೃವಿಯೋಗ

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ

Suddi Udaya

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

Suddi Udaya

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

Suddi Udaya
error: Content is protected !!