23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ವಲಯ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಮಚ್ಚಿನ: ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯ ಇದರ 23 ನೇ ವಾರ್ಷಿಕ ಮಹಾಸಭೆಯು ಜ.15 ರಂದು ಯಸ್ ಡಿ ಯಸ್ ಹಾಲ್ ಮಡಂತ್ಯಾರ್ ಇಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಟೋ ಚಾಲಕ ಮಾಲಕರ ಸಂಘದ ಗೌರವಾಧ್ಯಕ್ಷ ನ್ಯಾಯವಾದಿ ಬದ್ರಿನಾಥ್ ಸಂಪಿಗೆತ್ತಾಯ ಇವರು ಮಾತನಾಡಿ ಮಡಂತ್ಯಾರ್ ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಕೆಲಸಗಳು ನಡೆಯುತ್ತಿದ್ದು ಆಟೋ ಚಾಲಕರಿಗೆ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆಯನ್ನು ಎರಡು ಗ್ರಾಮ ಪಂಚಾಯಿತಿಗಳು ಒಟ್ಟು ಸೇರಿ ಮಾಡಿಕೊಡುವಂತೆ ಕೋರಿದರು.

ಮುಖ್ಯ ಅತಿಥಿಗಳಾಗಿ ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪ ನವೀನ್, ಮಾಲಾಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ್ ರೈ, ಆಟೋ ಚಾಲಕ ಮಾಲಕರ ಸಂಘದ ಮಾಜಿ ಅಧ್ಯಕ್ಷ ಮಚ್ಚಿನ ಗ್ರಾಮ ಪಂಚಾಯತ್ ಸದಸ್ಯ ಪ್ರಮೋದ್ ಕುಮಾರ್ ಬಳ್ಳಮಂಜ, ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ಪದ್ಮನಾಭ ಶೆಟ್ಟಿ ಉಪಸ್ಥಿತರಿದ್ದರು.

ಆಟೋ ಚಾಲಕರ ವಿವಿಧ ಬೇಡಿಕೆಯ ಮನವಿಯನ್ನು ಮಡಂತ್ಯಾರು ಹಾಗೂ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಿಗೂ ಹಾಗೂ ಅಭಿವೃದ್ಧಿ ಅಧಿಕಾರಿಗಳಿಗೆ ಸಂಘದ ಗೌರವಾಧ್ಯಕ್ಷ ಬದ್ರಿನಾಥ ಸಂಪಿಗೆತ್ತಾಯ ಹಾಗೂ ಅಧ್ಯಕ್ಷ ಪದ್ಮನಾಭ ಶೆಟ್ಟಿ ನೀಡಿದರು.

ಆಟೋ ಚಾಲಕ ಮಾಲಕರ ಸಂಘದ ನೂತನ ಅಧ್ಯಕ್ಷರಾದ ರಾಜೇಶ್ವರಿ ಕೊಕ್ಕಳ ಕಾರ್ಯದರ್ಶಿಯಾಗಿ ರಮೇಶ್ ಕೊಡೈಲು ಬಳ್ಳಮಂಜ ಇವರಿಗೆ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಕಾರ್ಯದರ್ಶಿಯಾದ ವಸಂತ ಬಳ್ಳಮಂಜ ಇವರು ಅಧಿಕಾರ ಹಸ್ತಾಂತರಿಸಿದರು. ಕರುಣಾಕರ ಸ್ವಾಗತಿಸಿದರು. ವಸಂತ ಬಳ್ಳಮಂಜ ವಾರ್ಷಿಕ ವರದಿ ಮಂಡಿಸಿದರು. ರಮೇಶ್ ಕುದ್ರಡ್ಕ ಕಾರ್ಯಕ್ರಮ ನಿರೂಪಿಸಿದರು.

Related posts

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya

ಗೇರುಕಟ್ಟೆ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪುರುಷೋತ್ತಮ ಜಿ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!