ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಶೀಟು ಕಾಯರ್ತೋಡಿ ರಸ್ತೆಯಲ್ಲಿ ಶಾಲೆಗೆ ಸೈಕಲಿನಲ್ಲಿ ಬರುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಸಡನ್‌ಆಗಿ ಚಿರತೆ ಎದುರಾಗಿದ್ದು, ಭಯಗೊಂಡ ಬಾಲಕ ತಕ್ಷಣ ಸೈಕಲ್ ಹಿಂದಕ್ಕೆ ತಿರುಗಿಸಿ ವೇಗವಾಗಿ ಮನೆಗೆ ಹೋಗಿ ಅಪಾಯದಿಂದ ಪಾರಾದ ಘಟನೆ ಜ.16 ರಂದು ಬೆಳಿಗ್ಗೆ ನಡೆದಿದೆ.

ಮುಂಡಾಜೆ ಪ್ರೌಢ ಶಾಲೆಯಲ್ಲಿ 10 ನೇ ತರಗತಿಯಲ್ಲಿ ಕಲಿಯುತ್ತಿರುವ, ಕಲ್ಮಂಜ ಗ್ರಾಮದ ಜ್ಞಾನೇಶ ತನ್ನ ಸಮಯ ಪ್ರಜ್ಞೆಯಿಂದ ಜೀವಪಾಯದಿಂದ ಪಾರಾದ ವಿದ್ಯಾರ್ಥಿಯಾಗಿದ್ದಾನೆ. ಮುಂಡಾಜೆ ಗ್ರಾಮದ ಶೀಟು ಕಾರ್ಯರ್ತೋಡಿ ರಸ್ತೆಯಲ್ಲಿ ಮೂರು ಮಾರ್ಗ ಎಂಬಲ್ಲಿ ಇಂದು ಬೆಳಿಗ್ಗೆ 7.30ರ ಸಮಯ ಶಾಲಾ ಬಾಲಕ ಜ್ಞಾನೇಶ ಶಾಲೆಗೆ ತನ್ನ ಸೈಕಲ್‌ನಲ್ಲಿ ಬರುತ್ತಿದ್ದ ವೇಳೆ ಕಾಡಿನಿಂದ ರಸ್ತೆಗೆ ಇಳಿದ ಚಿರತೆ ಎದುರಾಗಿದೆ. ಚಿರತೆ ಒಮ್ಮೆಲೇ ಎದುರಿಗೆ ಬಂದದನ್ನು ನೋಡಿ ಹೆದರಿ, ಭೀತಿಗೊಂಡ ಬಾಲಕ ತಮ್ಮ ಸಮಯ ಪ್ರಜ್ಞೆಯಿಂದ ಸೈಕಲ್‌ನ್ನು ತಕ್ಷಣ ಹಿಂದಕ್ಕೆ ತಿರುಗಿಸಿ, ವೇಗವಾಗಿ ಮನೆಗೆ ಬಂದು ಅಪಾಯದಿಂದ ಪಾರಾಗಿದ್ದಾನೆ.


ಕಡಿರುದ್ಯಾವರದಲ್ಲಿ ಪ್ರತ್ಯಕ್ಷಗೊಂಡ ನಾಲ್ಕು ಚಿರತೆ:

ಇಂದು ಬೆಳಿಗ್ಗೆ ಕಡಿರುದ್ಯಾವರ ಗ್ರಾಮದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷಗೊಂಡಿದೆ. ಕಡಿರುದ್ಯಾವರ ಗ್ರಾಮದ ಕಾರ್ನಪ ಎಂಬಲ್ಲಿ ನಾಲ್ಕು ಚಿರತೆಗಳು ಸ್ಥಳೀಯರಿಗೆ ಕಂಡು ಬಂದಿದೆ. ಸ್ಥಳೀಯ ಕಾಡಿನಿಂದ ನಾಡಿಗೆ ಇಳಿದು ಬಂದಿದ್ದು, ನಾಗರಿಕರಲ್ಲಿ ಆಂತಕ ಸೃಷ್ಟಿಸಿದೆ. ಕಳೆದ ನಾಲ್ಕು ದಿನಗಳ ಹಿಂದೆ ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ ಅನಂತ ಭಟ್ ಮಚ್ಚಿಮಲೆ ಇವರ ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಕಂಡು ಬಂದಿತ್ತು. ರಬ್ಬರ್ ತೋಟಕ್ಕೆ ಬೆಳಗ್ಗಿನ ಜಾವ ಟ್ಯಾಪಿಂಗ್‌ಗೆ ಕಾರ್ಮಿಕರು ಹೋದಾಗ ಚಿರತೆಗಳು ಕಂಡು ಬಂದಿತ್ತು. ಒಂದು ದೊಡ್ಡ ಚಿರತೆಯ ಜೊತೆ ಮೂರು ಮರಿ ಚಿರತೆಗಳು ಇದ್ದವು. ಚಾರ್ಮಾಡಿ, ಮುಂಡಾಜೆ, ಕಡಿರುದ್ಯಾವರ, ಮಿತ್ತಬಾಗಿಲು ಪರಿಸರದ ಕಾಡಿನಲ್ಲಿ ಇವು ಓಡಾಟ ನಡೆಸುತ್ತಿದ್ದು, ಜನರು ಜಾಗೃತೆ ವಹಿಸಬೇಕಾಗಿದೆ. ಅರಣ್ಯ ಇಲಾಖೆ ಇದವರ ಬಗ್ಗೆ ತಕ್ಷಣ ಕ್ರಮ ವಹಿಸುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್‌ನಲ್ಲಿ ಖರೀದಿಗೆ ವಿಶೇಷ ಡಿಸ್ಕೌಂಟ್

Suddi Udaya

ಬಳಂಜ: ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಧರ್ಮಸ್ಥಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya
error: Content is protected !!