25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ ಕಾರ್ಯಕ್ರಮಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜಿನ ಎನ್.ಎಸ್.ಎಸ್ ಘಟಕದ ಮುಖ್ಯಸ್ಥ ಡಾ. ಮಹೇಶ್ ಕುಮಾರ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ಜ.26 ರಂದು ಬೆಂಗಳೂರಿನ ಮಾಣಿಕ್ ಷಾ ಕ್ರೀಡಾಂಗಣದಲ್ಲಿ ನಡೆಯುವ ಕರ್ನಾಟಕ ರಾಜ್ಯ ಗಣರಾಜ್ಯೋತ್ಸವ ಪಥಸಂಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ತಂಡದ ಕಾರ್ಯಕ್ರಮ ಅಧಿಕಾರಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು (ಸ್ವಾಯತ್ತ), ಉಜಿರೆ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಮುಖ್ಯಸ್ಥ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್ ಇವರು ಆಯ್ಕೆಯಾಗಿದ್ದಾರೆ.

ಕಾಲೇಜಿನಿಂದ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದಿಂದ ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸೇವಾ ಯೋಜನಾ ವಿಭಾಗದಿಂದ ಪ್ರತಿನಿಧಿಸುತ್ತಿರುವ ಮೊದಲ ಕಾರ್ಯಕ್ರಮ ಅಧಿಕಾರಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಇತ್ತೀಚೆಗಷ್ಟೇ ಇವರು ಹರಿಯಾಣದ ಕುರುಕ್ಷೇತ್ರ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ ಒಂದು ವಾರದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು.

ಕಳೆದ ಮೂರು ವರ್ಷಗಳಿಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ವಿಭಾಗದ ಮುಖ್ಯಸ್ಥರಾಗಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಂಡು ಕಾಲೇಜಿಗೆ ಮತ್ತು ವಿಶ್ವವಿದ್ಯಾನಿಲಯಕ್ಕೆ ಹಿರಿಮೆಯನ್ನು ತಂದಿರುವ ಇವರಿಗೆ ಎಸ್. ಡಿ. ಎಂ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಪ್ರೊ ವಿಶ್ವನಾಥ ಪಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಸಂಯೋಜನಾಧಿಕಾರಿಗಳಾದ ಡಾ. ಶೇಷಪ್ಪ ಕೆ. ಅಭಿನಂದಿಸಿ ಶುಭ ಹಾರೈಸಿದ್ದಾರೆ.

Related posts

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ‘ನಾಂದಿ’ 2025 ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಸುಲ್ಕೇರಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ ನಿಧನ

Suddi Udaya

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!