23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು: ಹಿಂದೂ ಸಮಾಜದಲ್ಲಿ ಶಾಂತಿ, ಸಾಮರಸ್ಯ, ಏಕತೆ, ಸಾಂಸ್ಕೃತಿಕ ಜಾಗೃತಿಯನ್ನು ಬಲಪಡಿಸುವ ಉದ್ದೇಶದಿಂದ ರಾಷ್ಟ್ರದಾದ್ಯಂತ ಹಿಂದೂ ಸಂಗಮ ಕಾರ್ಯಕ್ರಮ ನಡೆಯುತ್ತಿದೆ. ಹಿಂದೂ ಸಂಗಮ ಆಯೋಜನ ಸಮಿತಿ ವೇಣೂರು ತಾಲೂಕು, ವೇಣೂರು ಮಂಡಲದ ಸಂಯೋಜನೆಯಲ್ಲಿ ಜ.31 ರಂದು ಸಂಜೆ 3 ಗಂಟೆಗೆ ವೇಣೂರು ಶ್ರೀರಾಮ ಭಜನಾ ಮಂದಿರದಿಂದ ಶ್ರೀಮಹಾಲಿಂಗೇಶ್ವರ ದೇವಸ್ಥಾನದವರೆಗೆ ಬೃಹತ್ ಶೋಭಾಯಾತ್ರೆಯೊಂದಿಗೆ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಿಂದೂ ಸಂಗಮದ ಸಭಾ ಕಾರ್ಯಕ್ರಮ ನಡೆಯಲಿದೆ.


ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ಪೂಜೆ ಪ್ರಾರ್ಥನೆ ಸಲ್ಲಿಸಿ ವೇಣೂರು ಹಿಂದೂ ಸಂಗಮದ ಸಂಚಾಲಕ ಪುರುಷೋತ್ತಮ ರಾವ್ ಬಿಡುಗಡೆ ಮಾಡಿದರು. ಹಿಂದೂ ಸಂಗಮ ಕಾರ್ಯಕ್ರಮದ ಅಧ್ಯಕ್ಷ ಶ್ರವಣ್ ಕೆ. ಮಿತ್ತೋಟ್ಟು ಕರಿಮಣೇಲು, ವೇಣೂರು ತಾಲೂಕು ಹಿಂದೂ ಸಂಗಮ ಆಯೋಜನ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯ ಗೌಡ ವೇಣೂರು, ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರಾದ ನೇಮಯ್ಯ ಕುಲಾಲ್, ಪಂಚಾಯತ್ ಸದಸ್ಯ ಉಮೇಶ ನಡ್ತಿಕಲ್ಲು, ಶ್ರೀನಿಧಿ ಶಾಮಿಯಾನದ ಮಾಲಕರಾದ ಜಗದೀಶ ಭಟ್, ಉದ್ಯಮಿ ರಾಜೇಶ ಕೊಪ್ಪದಬಾಕಿಮಾರು, ಕಾಶೀನಾಥ ಹೆಗ್ಡೆ ಬಜಿರೆ, ಪ್ರವೀಣ ಕುಮಾರ್ LIC, ರಾಮದಾಸ ನಾಯಕ್ ಕರಿಮಣೇಲು, ನಿರ್ಮಲ್ ಪೈ ವೇಣೂರು, ದಯಾನಂದ ಭಂಡಾರಿ ಕರಿಮಣೇಲು, ಜಯರಾಮ ಆಚಾರ್ಯ ಕಾಂಜರಕಟ್ಟೆ, ಹರೀಶ ಕಾಂಜರಕಟ್ಟೆ, ಸೋಮನಾಥ ಕೆ.ವಿ, ಉಮೇಶ ವೇಣೂರು, ದಿನೇಶ ವೇಣೂರು, ಸಂಯೋಜಕ ಪ್ರಕಾಶ ಪುರೋಹಿತ್ ವೇಣೂರು ಮೊದಲಾದವರು ಉಪಸ್ಥಿತರಿದ್ದರು.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಪಿಯುಸಿ ಫಲಿತಾಂಶ: ಶ್ರೀದೇವಿ ಕಲಾ ವಿಭಾಗದಲ್ಲಿ ವಾಣಿ ಕಾಲೇಜಿಗೆ ಪ್ರಥಮ

Suddi Udaya

ಬೆಳ್ತಂಗಡಿ ಕೋಟಿ-ಚೆನ್ನಯ ಕ್ರೀಡಾಕೂಟ: ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯಾವಳಿ ಜಿಲ್ಲಾ ರಾಜ್ಯೋತ್ಸವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಪ್ರಥಮ ಪ್ರಶಸ್ತಿ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya
error: Content is protected !!