September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು: ಹಿಂದೂ ಸಮಾಜದಲ್ಲಿ ಶಾಂತಿ, ಸಾಮರಸ್ಯ, ಏಕತೆ, ಸಾಂಸ್ಕೃತಿಕ ಜಾಗೃತಿಯನ್ನು ಬಲಪಡಿಸುವ ಉದ್ದೇಶದಿಂದ ರಾಷ್ಟ್ರದಾದ್ಯಂತ ಹಿಂದೂ ಸಂಗಮ ಕಾರ್ಯಕ್ರಮ ನಡೆಯುತ್ತಿದೆ. ಹಿಂದೂ ಸಂಗಮ ಆಯೋಜನ ಸಮಿತಿ ವೇಣೂರು ತಾಲೂಕು, ವೇಣೂರು ಮಂಡಲದ ಸಂಯೋಜನೆಯಲ್ಲಿ ಜ.31 ರಂದು ಸಂಜೆ 3 ಗಂಟೆಗೆ ವೇಣೂರು ಶ್ರೀರಾಮ ಭಜನಾ ಮಂದಿರದಿಂದ ಶ್ರೀಮಹಾಲಿಂಗೇಶ್ವರ ದೇವಸ್ಥಾನದವರೆಗೆ ಬೃಹತ್ ಶೋಭಾಯಾತ್ರೆಯೊಂದಿಗೆ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಹಿಂದೂ ಸಂಗಮದ ಸಭಾ ಕಾರ್ಯಕ್ರಮ ನಡೆಯಲಿದೆ.


ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ಪೂಜೆ ಪ್ರಾರ್ಥನೆ ಸಲ್ಲಿಸಿ ವೇಣೂರು ಹಿಂದೂ ಸಂಗಮದ ಸಂಚಾಲಕ ಪುರುಷೋತ್ತಮ ರಾವ್ ಬಿಡುಗಡೆ ಮಾಡಿದರು. ಹಿಂದೂ ಸಂಗಮ ಕಾರ್ಯಕ್ರಮದ ಅಧ್ಯಕ್ಷ ಶ್ರವಣ್ ಕೆ. ಮಿತ್ತೋಟ್ಟು ಕರಿಮಣೇಲು, ವೇಣೂರು ತಾಲೂಕು ಹಿಂದೂ ಸಂಗಮ ಆಯೋಜನ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯ ಗೌಡ ವೇಣೂರು, ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರಾದ ನೇಮಯ್ಯ ಕುಲಾಲ್, ಪಂಚಾಯತ್ ಸದಸ್ಯ ಉಮೇಶ ನಡ್ತಿಕಲ್ಲು, ಶ್ರೀನಿಧಿ ಶಾಮಿಯಾನದ ಮಾಲಕರಾದ ಜಗದೀಶ ಭಟ್, ಉದ್ಯಮಿ ರಾಜೇಶ ಕೊಪ್ಪದಬಾಕಿಮಾರು, ಕಾಶೀನಾಥ ಹೆಗ್ಡೆ ಬಜಿರೆ, ಪ್ರವೀಣ ಕುಮಾರ್ LIC, ರಾಮದಾಸ ನಾಯಕ್ ಕರಿಮಣೇಲು, ನಿರ್ಮಲ್ ಪೈ ವೇಣೂರು, ದಯಾನಂದ ಭಂಡಾರಿ ಕರಿಮಣೇಲು, ಜಯರಾಮ ಆಚಾರ್ಯ ಕಾಂಜರಕಟ್ಟೆ, ಹರೀಶ ಕಾಂಜರಕಟ್ಟೆ, ಸೋಮನಾಥ ಕೆ.ವಿ, ಉಮೇಶ ವೇಣೂರು, ದಿನೇಶ ವೇಣೂರು, ಸಂಯೋಜಕ ಪ್ರಕಾಶ ಪುರೋಹಿತ್ ವೇಣೂರು ಮೊದಲಾದವರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಎಂಜೆಎಂ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಕಣಿಯೂರು ಗ್ರಾಮಪಂಚಾಯತ್ ಮಟ್ಟದ ಜನಸ್ಪಂದನ ಸಭೆ

Suddi Udaya

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ – ವಸಂತ ಮರಕಡ ಅಧ್ಯಕ್ಷತೆಯ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!