ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆಗೆ ಉಪ ಪ್ರಾಂಶುಪಾಲರಿಂದ ಮೆಚ್ಚುಗೆ

ಪುಂಜಾಲಕಟ್ಟೆ: ವಿದ್ಯಾರ್ಥಿಗಳು ತಮ್ಮನ್ನು ತಾವು ಕಲಿಕೆಯೊಂದಿಗೆ ಇತರ ಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿ ಕೊಂಡಾಗ ಸಾಧನೆಯ ಶಿಖರವನ್ನು ಏರಲು ಸಾಧ್ಯ. ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಸ್ಥೆಯ ವಿದ್ಯಾರ್ಥಿಗಳು ಅಂತಹ ಸಾಧನೆಯನ್ನು ಮಾಡಿ ಸಂಸ್ಥೆಗೆ ಹಾಗೂ ಪೋಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ನಿರಂಜನ್ ಜೈನ್ ಐ ಇವರು ಮಕ್ಕಳಿಗೆ ಪ್ರಶಂಸನ ಪತ್ರ ನೀಡಿ ಶುಭ ಹಾರೈಸಿದರು.

ಕರ್ನಾಟಕ ಸರ್ಕಾರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರು ನಡೆಸುವ ರಾಜ್ಯಮಟ್ಟದ ಪರೀಕ್ಷೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಸಂಸ್ಥೆಯಿಂದ 33 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಶೇಕಡ 100 ಫಲಿತಾಂಶದೊಂದಿಗೆ ಶಾಲೆಗೆ ಕೀರ್ತಿ ತಂದಿದ್ದಾರೆ. ಇದರಲ್ಲಿ 17 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 16 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರಿಗೆ ಸೂಕ್ತ ಸಲಹೆ ಸೂಚನೆ ಹಾಗೂ ತರಬೇತಿ ನೀಡಿದ ಸದಾನಂದ ಬಿರಾದಾರ್ ಚಿತ್ರಕಲಾ ಶಿಕ್ಷಕರನ್ನು ಈ ಸಂದರ್ಭದಲ್ಲಿ ಸ್ನೇಹದಿಂದ ಪ್ರೋತ್ಸಾಹಿಸಲಾಯಿತು. ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಉಪಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಅಭಿನಂದಿಸಿ ಗೌರವಿಸಿದರು.

ಫಲಿತಾಂಶದ ವಿವರ ಲೋಹರ್ ಗ್ರೇಡ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿ ಪಡೆದವರು ದೀಕ್ಷಿತ್ ಡಿ.(417), ಹರ್ಷಿತ (414),
ಸುಶೃತ್ ಶರ್ಮ (409), ಪ್ರಣಮ್ (398) , ಶಿವಾನಂದ್ ಲಕ್ಕಪ್ಪ ಸೂರಣ್ಣನವರ 377 , ಮೇಘಶ್ರೀ 396, ದಿಶಾನ್ 379 ವೈಷ್ಣವಿ 364, ಅತ್ಯುನತ ಶ್ರೇಣಿ ಮಾನ್ವಿ ಎಂ 482, ಅಂಕಿತ 481, ನೈಮಾ ಬಾನು 427, ಶ್ರದ್ದಾ 427, ಅನನ್ಯ 430, ಸಾನಿಕ 430, ಚೇತನ್ 420,
ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿ ಫಲಿತಾಂಶ ಪಡೆದವರು: ಜಯರಾಮ 414, ಸಿಂಚನ 412, ರಕ್ಷಿತಾ 406, ಸೃಷ್ಟಿ 404, ಲಿಖಿತ 395, ಪಲ್ಲವಿ 392, ತೃಷಾ ಶೆಟ್ಟಿ 394, ಅತ್ಯುನ್ನತ ಶ್ರೇಣಿ ಪ್ರೀತಮ್ 472 , ಭುವನೇಶ್ 466,ಭೂಷಣ್ 465 , ಶಶಾಂಕ್ 449,ಪ್ರಜ್ಞಾ 448 , ಚಿತ್ರಾ 439, ವೀಕ್ಷಿತಾ 439 , ಶಿಯಾ 435, ರೇಖಾ 427 , ನಯನ 425.

Related posts

ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣoದೂರು ಪಣಕಜೆ ಇದರ ಆಶ್ರಯದಲ್ಲಿ ಪುರುಷರ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬ್ಬಡಿ ಪಂದ್ಯಾಟ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ಪರಿಸರ ಸೂಕ್ಷ್ಮ ಪ್ರದೇಶವನ್ನು ನಿಗದಿಪಡಿಸಿ ಕರಡು ಅಧಿಸೂಚನೆ : ರಾಜ್ಯ ಸರ್ಕಾರವು ಭೌತಿಕ ಸಮೀಕ್ಷೆ ನಡೆಸಿ ಜನವಸತಿ ಪ್ರದೇಶ ವಿರಹಿತಗೊಳಿಸಿ ಜನರ ಆತಂಕವನ್ನು ನಿವಾರಿಸಬೇಕು : ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

Suddi Udaya
error: Content is protected !!