March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ ಹಿನ್ನೆಲೆಯಲ್ಲಿ ಗಣವೇಷಧಾರಿ ಸೇವಿಕೆಯರಿಂದ ಜ.17ರಂದು ವೇಣೂರು ಶ್ರೀ ರಾಮ ಭಜನಾ ಮಂದಿರದಿಂದ ಪಥ ಸಂಚಲನ ಹೊರಟು ವೇಣೂರು ಶ್ರೀ ಮಹಾವೀರ ನಗರದ ಭರತೇಶ ಸಭಾ ಭವನದ ವರೆಗೆ ಜರುಗಿತು.

ಬಳಿಕ ಭರತೇಶ ಸಭಾ ಭವನದಲ್ಲಿ ಜರುಗಿದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರು ಶೀಲಾ ಎಸ್. ಹೆಗ್ಡೆ ವಹಿಸಿದ್ದರು. ಜಿಲ್ಲಾ ಬೌದ್ದಿಕ್ ಪ್ರಮುಖ್ ಪ್ರತಿಭಾ ರವರು ಬೌದ್ದಿಕ್ ನ್ನು ನೆರವೇರಿಸಿದರು. ವೇದಿಕೆಯಲ್ಲಿ ಪುತ್ತೂರು ಜಿಲ್ಲಾ ಸಂಚಾಲಿಕ ಸವಿತಾ ಭಟ್ ಉಪಸ್ಥಿತರಿದ್ದರು. ಪಥ ಸಂಚಲನದಲ್ಲಿ ಸುಮಾರು 500 ಗಣವೇಷಧಾರಿಗಳು ಭಾಗವಹಿಸಿದರು.

ಈ ಸಂದರ್ಭದಲ್ಲಿ ಸುಳ್ಯದ ಶಾಸಕಿ ಭಾಗೀರತಿ ಮುರುಳ್ಯ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಸಂಘ ಚಾಲಕ ವಿನಯಚಂದ್ರ, ಪ್ರಕಾಶ್ ಪುರೋಹಿತ್ ವೇಣೂರು, ಪುತ್ತೂರು ಜಿಲ್ಲಾ ಸಂಚಾಲಕಿ ಪೂರ್ಣಿಮಾ, ಅಧಿಕಾರಿ ವರ್ಗ ಪ್ರಾಂತ ಸಹ ಬೌದ್ಧಿಕ್ ಪ್ರಮುಖ್ ಮೀನಾಕ್ಷಿ, ಪ್ರಾಂತ ಶಾರೀರಿಕ್ ಪ್ರಮುಖ್ ಶಿಲ್ಪಾ, ವಿಭಾಗ ಕಾರ್ಯವಾಹಿಕ ಗಿರಿಜಾ ಭಟ್, ವಿಭಾಗ ಸಹ ಕಾರ್ಯವಾಹಿಕ ಕಲ್ಪನಾ, ಉಡುಪಿ ಜಿಲ್ಲಾ ಕಾರ್ಯವಾಹಿಕ ಶಶಿಕಲಾ ಮಣಿಯಾನಿ, ಮಂಗಳೂರು ವಿಭಾಗ ಶಾರೀರಿಕ ಪ್ರಮುಖ್ ರಾಜಲಕ್ಷ್ಮಿ, ವಿಭಾಗ ಸಹ ಶಾರೀರಿಕ ಪ್ರಮುಖ್ ಚಿತ್ರಾಕ್ಷಿ, ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯವಾಹಿಕ ಸುಷ್ಮಾ, ಸಂಘದ ಹಿತೈಷಿಗಳು ಉಪಸ್ಥಿತರಿದ್ದರು.ಜಿಲ್ಲಾ ಕಾರ್ಯವಾಹಿಕಾ ವೇದಾವತಿ ಜನಾರ್ಧನ ಸ್ವಾಗತಿಸಿದರು. ವೇಣೂರು ತಾಲೂಕು ಕಾರ್ಯವಾಹಿಕ ರೋಹಿಣಿ ವಂದಿಸಿದರು.

Related posts

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya

ಧರ್ಮಸ್ಥಳ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya
error: Content is protected !!