30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ ಹಿನ್ನೆಲೆಯಲ್ಲಿ ಗಣವೇಷಧಾರಿ ಸೇವಿಕೆಯರಿಂದ ಜ.17ರಂದು ವೇಣೂರು ಶ್ರೀ ರಾಮ ಭಜನಾ ಮಂದಿರದಿಂದ ಪಥ ಸಂಚಲನ ಹೊರಟು ವೇಣೂರು ಶ್ರೀ ಮಹಾವೀರ ನಗರದ ಭರತೇಶ ಸಭಾ ಭವನದ ವರೆಗೆ ಜರುಗಿತು.

ಬಳಿಕ ಭರತೇಶ ಸಭಾ ಭವನದಲ್ಲಿ ಜರುಗಿದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರು ಶೀಲಾ ಎಸ್. ಹೆಗ್ಡೆ ವಹಿಸಿದ್ದರು. ಜಿಲ್ಲಾ ಬೌದ್ದಿಕ್ ಪ್ರಮುಖ್ ಪ್ರತಿಭಾ ರವರು ಬೌದ್ದಿಕ್ ನ್ನು ನೆರವೇರಿಸಿದರು. ವೇದಿಕೆಯಲ್ಲಿ ಪುತ್ತೂರು ಜಿಲ್ಲಾ ಸಂಚಾಲಿಕ ಸವಿತಾ ಭಟ್ ಉಪಸ್ಥಿತರಿದ್ದರು. ಪಥ ಸಂಚಲನದಲ್ಲಿ ಸುಮಾರು 500 ಗಣವೇಷಧಾರಿಗಳು ಭಾಗವಹಿಸಿದರು.

ಈ ಸಂದರ್ಭದಲ್ಲಿ ಸುಳ್ಯದ ಶಾಸಕಿ ಭಾಗೀರತಿ ಮುರುಳ್ಯ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಸಂಘ ಚಾಲಕ ವಿನಯಚಂದ್ರ, ಪ್ರಕಾಶ್ ಪುರೋಹಿತ್ ವೇಣೂರು, ಪುತ್ತೂರು ಜಿಲ್ಲಾ ಸಂಚಾಲಕಿ ಪೂರ್ಣಿಮಾ, ಅಧಿಕಾರಿ ವರ್ಗ ಪ್ರಾಂತ ಸಹ ಬೌದ್ಧಿಕ್ ಪ್ರಮುಖ್ ಮೀನಾಕ್ಷಿ, ಪ್ರಾಂತ ಶಾರೀರಿಕ್ ಪ್ರಮುಖ್ ಶಿಲ್ಪಾ, ವಿಭಾಗ ಕಾರ್ಯವಾಹಿಕ ಗಿರಿಜಾ ಭಟ್, ವಿಭಾಗ ಸಹ ಕಾರ್ಯವಾಹಿಕ ಕಲ್ಪನಾ, ಉಡುಪಿ ಜಿಲ್ಲಾ ಕಾರ್ಯವಾಹಿಕ ಶಶಿಕಲಾ ಮಣಿಯಾನಿ, ಮಂಗಳೂರು ವಿಭಾಗ ಶಾರೀರಿಕ ಪ್ರಮುಖ್ ರಾಜಲಕ್ಷ್ಮಿ, ವಿಭಾಗ ಸಹ ಶಾರೀರಿಕ ಪ್ರಮುಖ್ ಚಿತ್ರಾಕ್ಷಿ, ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯವಾಹಿಕ ಸುಷ್ಮಾ, ಸಂಘದ ಹಿತೈಷಿಗಳು ಉಪಸ್ಥಿತರಿದ್ದರು.ಜಿಲ್ಲಾ ಕಾರ್ಯವಾಹಿಕಾ ವೇದಾವತಿ ಜನಾರ್ಧನ ಸ್ವಾಗತಿಸಿದರು. ವೇಣೂರು ತಾಲೂಕು ಕಾರ್ಯವಾಹಿಕ ರೋಹಿಣಿ ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕುತ್ಲೂರು: ಕಾಡಬಾಗಿಲು ನಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya
error: Content is protected !!