July 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ ಹಿನ್ನೆಲೆಯಲ್ಲಿ ಗಣವೇಷಧಾರಿ ಸೇವಿಕೆಯರಿಂದ ಜ.17ರಂದು ವೇಣೂರು ಶ್ರೀ ರಾಮ ಭಜನಾ ಮಂದಿರದಿಂದ ಪಥ ಸಂಚಲನ ಹೊರಟು ವೇಣೂರು ಶ್ರೀ ಮಹಾವೀರ ನಗರದ ಭರತೇಶ ಸಭಾ ಭವನದ ವರೆಗೆ ಜರುಗಿತು.

ಬಳಿಕ ಭರತೇಶ ಸಭಾ ಭವನದಲ್ಲಿ ಜರುಗಿದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರು ಶೀಲಾ ಎಸ್. ಹೆಗ್ಡೆ ವಹಿಸಿದ್ದರು. ಜಿಲ್ಲಾ ಬೌದ್ದಿಕ್ ಪ್ರಮುಖ್ ಪ್ರತಿಭಾ ರವರು ಬೌದ್ದಿಕ್ ನ್ನು ನೆರವೇರಿಸಿದರು. ವೇದಿಕೆಯಲ್ಲಿ ಪುತ್ತೂರು ಜಿಲ್ಲಾ ಸಂಚಾಲಿಕ ಸವಿತಾ ಭಟ್ ಉಪಸ್ಥಿತರಿದ್ದರು. ಪಥ ಸಂಚಲನದಲ್ಲಿ ಸುಮಾರು 500 ಗಣವೇಷಧಾರಿಗಳು ಭಾಗವಹಿಸಿದರು.

ಈ ಸಂದರ್ಭದಲ್ಲಿ ಸುಳ್ಯದ ಶಾಸಕಿ ಭಾಗೀರತಿ ಮುರುಳ್ಯ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಸಂಘ ಚಾಲಕ ವಿನಯಚಂದ್ರ, ಪ್ರಕಾಶ್ ಪುರೋಹಿತ್ ವೇಣೂರು, ಪುತ್ತೂರು ಜಿಲ್ಲಾ ಸಂಚಾಲಕಿ ಪೂರ್ಣಿಮಾ, ಅಧಿಕಾರಿ ವರ್ಗ ಪ್ರಾಂತ ಸಹ ಬೌದ್ಧಿಕ್ ಪ್ರಮುಖ್ ಮೀನಾಕ್ಷಿ, ಪ್ರಾಂತ ಶಾರೀರಿಕ್ ಪ್ರಮುಖ್ ಶಿಲ್ಪಾ, ವಿಭಾಗ ಕಾರ್ಯವಾಹಿಕ ಗಿರಿಜಾ ಭಟ್, ವಿಭಾಗ ಸಹ ಕಾರ್ಯವಾಹಿಕ ಕಲ್ಪನಾ, ಉಡುಪಿ ಜಿಲ್ಲಾ ಕಾರ್ಯವಾಹಿಕ ಶಶಿಕಲಾ ಮಣಿಯಾನಿ, ಮಂಗಳೂರು ವಿಭಾಗ ಶಾರೀರಿಕ ಪ್ರಮುಖ್ ರಾಜಲಕ್ಷ್ಮಿ, ವಿಭಾಗ ಸಹ ಶಾರೀರಿಕ ಪ್ರಮುಖ್ ಚಿತ್ರಾಕ್ಷಿ, ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯವಾಹಿಕ ಸುಷ್ಮಾ, ಸಂಘದ ಹಿತೈಷಿಗಳು ಉಪಸ್ಥಿತರಿದ್ದರು.ಜಿಲ್ಲಾ ಕಾರ್ಯವಾಹಿಕಾ ವೇದಾವತಿ ಜನಾರ್ಧನ ಸ್ವಾಗತಿಸಿದರು. ವೇಣೂರು ತಾಲೂಕು ಕಾರ್ಯವಾಹಿಕ ರೋಹಿಣಿ ವಂದಿಸಿದರು.

Related posts

ಶ್ರೀ ಶಾರದಾಂಭ ಭಜನಾ ಮಂಡಳಿಯಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಪಡೆದ ಸಂಜನಾ ಪೈ ಗೆ ಸನ್ಮಾನ

Suddi Udaya

ಓಡಿಲ್ನಾಳ ಸ. ಉ ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಮಹಿಳೆಯರಿಗೆ ಉಳಿತಾಯ ಮತ್ತು ಸ್ವ – ಉದ್ಯೋಗ ಮಾಹಿತಿ ಕಾರ್ಯಾಗಾರ

Suddi Udaya

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಲಗೋರಿ ಪಂದ್ಯಾಟ

Suddi Udaya
error: Content is protected !!