ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ ಹಿನ್ನೆಲೆಯಲ್ಲಿ ಗಣವೇಷಧಾರಿ ಸೇವಿಕೆಯರಿಂದ ಜ.17ರಂದು ವೇಣೂರು ಶ್ರೀ ರಾಮ ಭಜನಾ ಮಂದಿರದಿಂದ ಪಥ ಸಂಚಲನ ಹೊರಟು ವೇಣೂರು ಶ್ರೀ ಮಹಾವೀರ ನಗರದ ಭರತೇಶ ಸಭಾ ಭವನದ ವರೆಗೆ ಜರುಗಿತು.

ಬಳಿಕ ಭರತೇಶ ಸಭಾ ಭವನದಲ್ಲಿ ಜರುಗಿದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರು ಶೀಲಾ ಎಸ್. ಹೆಗ್ಡೆ ವಹಿಸಿದ್ದರು. ಜಿಲ್ಲಾ ಬೌದ್ದಿಕ್ ಪ್ರಮುಖ್ ಪ್ರತಿಭಾ ರವರು ಬೌದ್ದಿಕ್ ನ್ನು ನೆರವೇರಿಸಿದರು. ವೇದಿಕೆಯಲ್ಲಿ ಪುತ್ತೂರು ಜಿಲ್ಲಾ ಸಂಚಾಲಿಕ ಸವಿತಾ ಭಟ್ ಉಪಸ್ಥಿತರಿದ್ದರು. ಪಥ ಸಂಚಲನದಲ್ಲಿ ಸುಮಾರು 500 ಗಣವೇಷಧಾರಿಗಳು ಭಾಗವಹಿಸಿದರು.

ಈ ಸಂದರ್ಭದಲ್ಲಿ ಸುಳ್ಯದ ಶಾಸಕಿ ಭಾಗೀರತಿ ಮುರುಳ್ಯ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಸಂಘ ಚಾಲಕ ವಿನಯಚಂದ್ರ, ಪ್ರಕಾಶ್ ಪುರೋಹಿತ್ ವೇಣೂರು, ಪುತ್ತೂರು ಜಿಲ್ಲಾ ಸಂಚಾಲಕಿ ಪೂರ್ಣಿಮಾ, ಅಧಿಕಾರಿ ವರ್ಗ ಪ್ರಾಂತ ಸಹ ಬೌದ್ಧಿಕ್ ಪ್ರಮುಖ್ ಮೀನಾಕ್ಷಿ, ಪ್ರಾಂತ ಶಾರೀರಿಕ್ ಪ್ರಮುಖ್ ಶಿಲ್ಪಾ, ವಿಭಾಗ ಕಾರ್ಯವಾಹಿಕ ಗಿರಿಜಾ ಭಟ್, ವಿಭಾಗ ಸಹ ಕಾರ್ಯವಾಹಿಕ ಕಲ್ಪನಾ, ಉಡುಪಿ ಜಿಲ್ಲಾ ಕಾರ್ಯವಾಹಿಕ ಶಶಿಕಲಾ ಮಣಿಯಾನಿ, ಮಂಗಳೂರು ವಿಭಾಗ ಶಾರೀರಿಕ ಪ್ರಮುಖ್ ರಾಜಲಕ್ಷ್ಮಿ, ವಿಭಾಗ ಸಹ ಶಾರೀರಿಕ ಪ್ರಮುಖ್ ಚಿತ್ರಾಕ್ಷಿ, ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯವಾಹಿಕ ಸುಷ್ಮಾ, ಸಂಘದ ಹಿತೈಷಿಗಳು ಉಪಸ್ಥಿತರಿದ್ದರು.ಜಿಲ್ಲಾ ಕಾರ್ಯವಾಹಿಕಾ ವೇದಾವತಿ ಜನಾರ್ಧನ ಸ್ವಾಗತಿಸಿದರು. ವೇಣೂರು ತಾಲೂಕು ಕಾರ್ಯವಾಹಿಕ ರೋಹಿಣಿ ವಂದಿಸಿದರು.

Related posts

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಗೆ ಚಲನಚಿತ್ರ ನಟ ಮತ್ತು ನಿರ್ದೇಶಕ ಚೇತನ್ ರೈ ಮಾಣಿ ಭೇಟಿ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!