25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ. 19 ರಿಂದ ಸಂಜೆ ಕ್ಲಿನಿಕ್ ಪ್ರಾರಂಭ

ಉಜಿರೆ: ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರ ಬೇಡಿಕೆಯ ಮೇರೆಗೆ, ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದದಲ್ಲಿ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.19 ರಿಂದ ಸಂಜೆ ಕ್ಲಿನಿಕ್ ಪ್ರಾರಂಭಗೊಳ್ಳಲಿದೆ.


ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಕೆಲವೊಂದು ಜನರಿಗೆ ಹಗಲು ಹೊತ್ತಿನಲ್ಲಿ ತಮ್ಮ ಕೆಲಸದ ಒತ್ತಡದಿಂದ ವೈದ್ಯರನ್ನು ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಈ ಉದ್ದೇಶದಿಂದ ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಜೆ ಕ್ಲಿನಿಕ್ ಪ್ರಾರಂಭಿಸಿ ಸೋಮವಾರದಿಂದ ಶನಿವಾರದವರೆಗೆ ಸಂಜೆ 5ರಿಂದ 7ರವರೆಗೆ ತಜ್ಞ ವೈದ್ಯರಿಂದ ವೈದ್ಯಕೀಯ ಸೇವೆ ನೀಡಲು ಉದ್ದೇಶಿಸಲಾಗಿದೆ. ಇದರಿಂದ ಉದ್ಯೋಗಸ್ಥರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಅವರು ತಿಳಿಸಿದ್ದಾರೆ.


ಕಿವಿ-ಮೂಗು-ಗಂಟಲು ತಜ್ಞರು ಮಂಗಳವಾರ ಮತ್ತು ಶುಕ್ರವಾರ, ಶಸ್ತçಚಿಕಿತ್ಸಾ ತಜ್ಞರು ಸೋಮವಾರ ಹಾಗೂ ಗುರುವಾರ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಬುಧವಾರ ಮತ್ತು ಶನಿವಾರ, ನೇತ್ರ ಚಿಕಿತ್ಸಾ ತಜ್ಞರು ಮಂಗಳವಾರ, ಮೂಳೆ ಶಸ್ತçಚಿಕಿತ್ಸಾ ತಜ್ಞರು ಸೋಮವಾರ ಹಾಗೂ ಗುರುವಾರ, ಮಕ್ಕಳರೋಗ ತಜ್ಞರು ಬುಧವಾರ ಮತ್ತು ಶನಿವಾರ ಚರ್ಮರೋಗ ತಜ್ಞರು ಮಂಗಳವಾರ ಮತ್ತು ಶುಕ್ರವಾರ ಸಂಜೆ ಕ್ಲಿನಿಕ್‌ನಲ್ಲಿ ಲಭ್ಯವಿರುತ್ತಾರೆ. ಉಳಿದಂತೆ ದಿನದ 24 ಗಂಟೆಯೂ ಎಂದಿನಂತೆ ಈ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಲಭ್ಯವಿರಲಿದೆ.


ತಮಗೆ ಬೇಕಾದ ದಿನಗಳಲ್ಲಿ, ತಮಗೆ ಬೇಕಾದ ತಜ್ಞ ವೈದ್ಯರ ನೇಮಕಾತಿಯನ್ನು ದೂರವಾಣಿ 08256-295611/615 ಅಥವಾ 7760397878 ಸಂಖ್ಯೆಗೆ ಕರೆ ಮಾಡುವ ಮೂಲಕ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಸಂಜೆ ಕ್ಲಿನಿಕ್‌ನಲ್ಲಿ ನಗದು ಪಾವತಿಸುವ ರೋಗಿಗಳಿಗೆ ವೈದ್ಯರ ಸಮಾಲೋಚನೆ ಶುಲ್ಕ ರೂ. ೨೫೦ ಹಾಗೂ ಸಂಪೂರ್ಣ ಸುರಕ್ಷಾ ಮತ್ತು ಕೆ.ಕೆ.ಎಸ್.ವೈ ಹೊಂದಿರುವವರಿಗೆ ವೈದ್ಯರ ಸಮಾಲೋಚನೆ ಶುಲ್ಕದಲ್ಲಿ ರೂ. ೧೦೦ ಹೆಚ್ಚುವರಿ ಶುಲ್ಕ ಇರಲಿದೆ. ಪ್ರಯೋಗಾಲಯ, ರೇಡಿಯಾಲಜಿ, ಪ್ರೊಸಿಜರ್ ಮತ್ತು ಒಳರೋಗಿ ಸೇವೆಗಳಿಗೆ ಸಂಪೂರ್ಣ ಸುರಕ್ಷಾ ಮತ್ತು ಕೆ.ಕೆ.ಎಸ್.ವೈ ಯೋಜನೆಗಳು ಅನ್ವಯಿಸುತ್ತದೆ ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

Related posts

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!