July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆಗೆ ಉಪ ಪ್ರಾಂಶುಪಾಲರಿಂದ ಮೆಚ್ಚುಗೆ

ಪುಂಜಾಲಕಟ್ಟೆ: ವಿದ್ಯಾರ್ಥಿಗಳು ತಮ್ಮನ್ನು ತಾವು ಕಲಿಕೆಯೊಂದಿಗೆ ಇತರ ಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿ ಕೊಂಡಾಗ ಸಾಧನೆಯ ಶಿಖರವನ್ನು ಏರಲು ಸಾಧ್ಯ. ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಸ್ಥೆಯ ವಿದ್ಯಾರ್ಥಿಗಳು ಅಂತಹ ಸಾಧನೆಯನ್ನು ಮಾಡಿ ಸಂಸ್ಥೆಗೆ ಹಾಗೂ ಪೋಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ನಿರಂಜನ್ ಜೈನ್ ಐ ಇವರು ಮಕ್ಕಳಿಗೆ ಪ್ರಶಂಸನ ಪತ್ರ ನೀಡಿ ಶುಭ ಹಾರೈಸಿದರು.

ಕರ್ನಾಟಕ ಸರ್ಕಾರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರು ನಡೆಸುವ ರಾಜ್ಯಮಟ್ಟದ ಪರೀಕ್ಷೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಸಂಸ್ಥೆಯಿಂದ 33 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಶೇಕಡ 100 ಫಲಿತಾಂಶದೊಂದಿಗೆ ಶಾಲೆಗೆ ಕೀರ್ತಿ ತಂದಿದ್ದಾರೆ. ಇದರಲ್ಲಿ 17 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 16 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರಿಗೆ ಸೂಕ್ತ ಸಲಹೆ ಸೂಚನೆ ಹಾಗೂ ತರಬೇತಿ ನೀಡಿದ ಸದಾನಂದ ಬಿರಾದಾರ್ ಚಿತ್ರಕಲಾ ಶಿಕ್ಷಕರನ್ನು ಈ ಸಂದರ್ಭದಲ್ಲಿ ಸ್ನೇಹದಿಂದ ಪ್ರೋತ್ಸಾಹಿಸಲಾಯಿತು. ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಉಪಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಅಭಿನಂದಿಸಿ ಗೌರವಿಸಿದರು.

ಫಲಿತಾಂಶದ ವಿವರ ಲೋಹರ್ ಗ್ರೇಡ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿ ಪಡೆದವರು ದೀಕ್ಷಿತ್ ಡಿ.(417), ಹರ್ಷಿತ (414),
ಸುಶೃತ್ ಶರ್ಮ (409), ಪ್ರಣಮ್ (398) , ಶಿವಾನಂದ್ ಲಕ್ಕಪ್ಪ ಸೂರಣ್ಣನವರ 377 , ಮೇಘಶ್ರೀ 396, ದಿಶಾನ್ 379 ವೈಷ್ಣವಿ 364, ಅತ್ಯುನತ ಶ್ರೇಣಿ ಮಾನ್ವಿ ಎಂ 482, ಅಂಕಿತ 481, ನೈಮಾ ಬಾನು 427, ಶ್ರದ್ದಾ 427, ಅನನ್ಯ 430, ಸಾನಿಕ 430, ಚೇತನ್ 420,
ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿ ಫಲಿತಾಂಶ ಪಡೆದವರು: ಜಯರಾಮ 414, ಸಿಂಚನ 412, ರಕ್ಷಿತಾ 406, ಸೃಷ್ಟಿ 404, ಲಿಖಿತ 395, ಪಲ್ಲವಿ 392, ತೃಷಾ ಶೆಟ್ಟಿ 394, ಅತ್ಯುನ್ನತ ಶ್ರೇಣಿ ಪ್ರೀತಮ್ 472 , ಭುವನೇಶ್ 466,ಭೂಷಣ್ 465 , ಶಶಾಂಕ್ 449,ಪ್ರಜ್ಞಾ 448 , ಚಿತ್ರಾ 439, ವೀಕ್ಷಿತಾ 439 , ಶಿಯಾ 435, ರೇಖಾ 427 , ನಯನ 425.

Related posts

ಲಾಯಿಲ: ಸಾರಿ ಫೋಲ್ಡಿಂಗ್, ಬ್ರೈಡಲ್ ಮೇಕಪ್ ಹಾಗೂ ಸಾರಿ ಗೊಂಡೆ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಟಿಪ್ಪರ್ ವಾಹನದ ಬಾಡಿಗೆ ಕೇಳಲು ಹೋದವನ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya
error: Content is protected !!