ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ ಹಿನ್ನೆಲೆಯಲ್ಲಿ ಗಣವೇಷಧಾರಿ ಸೇವಿಕೆಯರಿಂದ ಜ.17ರಂದು ವೇಣೂರು ಶ್ರೀ ರಾಮ ಭಜನಾ ಮಂದಿರದಿಂದ ಪಥ ಸಂಚಲನ ಹೊರಟು ವೇಣೂರು ಶ್ರೀ ಮಹಾವೀರ ನಗರದ ಭರತೇಶ ಸಭಾ ಭವನದ ವರೆಗೆ ಜರುಗಿತು.

ಬಳಿಕ ಭರತೇಶ ಸಭಾ ಭವನದಲ್ಲಿ ಜರುಗಿದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರು ಶೀಲಾ ಎಸ್. ಹೆಗ್ಡೆ ವಹಿಸಿದ್ದರು. ಜಿಲ್ಲಾ ಬೌದ್ದಿಕ್ ಪ್ರಮುಖ್ ಪ್ರತಿಭಾ ರವರು ಬೌದ್ದಿಕ್ ನ್ನು ನೆರವೇರಿಸಿದರು. ವೇದಿಕೆಯಲ್ಲಿ ಪುತ್ತೂರು ಜಿಲ್ಲಾ ಸಂಚಾಲಿಕ ಸವಿತಾ ಭಟ್ ಉಪಸ್ಥಿತರಿದ್ದರು. ಪಥ ಸಂಚಲನದಲ್ಲಿ ಸುಮಾರು 500 ಗಣವೇಷಧಾರಿಗಳು ಭಾಗವಹಿಸಿದರು.

ಈ ಸಂದರ್ಭದಲ್ಲಿ ಸುಳ್ಯದ ಶಾಸಕಿ ಭಾಗೀರತಿ ಮುರುಳ್ಯ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಸಂಘ ಚಾಲಕ ವಿನಯಚಂದ್ರ, ಪ್ರಕಾಶ್ ಪುರೋಹಿತ್ ವೇಣೂರು, ಪುತ್ತೂರು ಜಿಲ್ಲಾ ಸಂಚಾಲಕಿ ಪೂರ್ಣಿಮಾ, ಅಧಿಕಾರಿ ವರ್ಗ ಪ್ರಾಂತ ಸಹ ಬೌದ್ಧಿಕ್ ಪ್ರಮುಖ್ ಮೀನಾಕ್ಷಿ, ಪ್ರಾಂತ ಶಾರೀರಿಕ್ ಪ್ರಮುಖ್ ಶಿಲ್ಪಾ, ವಿಭಾಗ ಕಾರ್ಯವಾಹಿಕ ಗಿರಿಜಾ ಭಟ್, ವಿಭಾಗ ಸಹ ಕಾರ್ಯವಾಹಿಕ ಕಲ್ಪನಾ, ಉಡುಪಿ ಜಿಲ್ಲಾ ಕಾರ್ಯವಾಹಿಕ ಶಶಿಕಲಾ ಮಣಿಯಾನಿ, ಮಂಗಳೂರು ವಿಭಾಗ ಶಾರೀರಿಕ ಪ್ರಮುಖ್ ರಾಜಲಕ್ಷ್ಮಿ, ವಿಭಾಗ ಸಹ ಶಾರೀರಿಕ ಪ್ರಮುಖ್ ಚಿತ್ರಾಕ್ಷಿ, ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯವಾಹಿಕ ಸುಷ್ಮಾ, ಸಂಘದ ಹಿತೈಷಿಗಳು ಉಪಸ್ಥಿತರಿದ್ದರು.ಜಿಲ್ಲಾ ಕಾರ್ಯವಾಹಿಕಾ ವೇದಾವತಿ ಜನಾರ್ಧನ ಸ್ವಾಗತಿಸಿದರು. ವೇಣೂರು ತಾಲೂಕು ಕಾರ್ಯವಾಹಿಕ ರೋಹಿಣಿ ವಂದಿಸಿದರು.

Related posts

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

Suddi Udaya

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya

ಬಂಟರ ಯಾನೆ ನಾಡವರ ಸಂಘ, ಕಣಿಯೂರು ಗ್ರಾಮ ಸಮಿತಿ ವತಿಯಿಂದ ಪದಗ್ರಹಣ, ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya
error: Content is protected !!