July 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ: ಗಣವೇಷಧಾರಿ ಸೇವಿಕೆಯರಿಂದ ಪಥ ಸಂಚಲನ

ವೇಣೂರು: ರಾಷ್ಟ್ರ ಸೇವಿಕಾ ಸಮಿತಿಗೆ 90ರ ಸಂಭ್ರಮ ಹಿನ್ನೆಲೆಯಲ್ಲಿ ಗಣವೇಷಧಾರಿ ಸೇವಿಕೆಯರಿಂದ ಜ.17ರಂದು ವೇಣೂರು ಶ್ರೀ ರಾಮ ಭಜನಾ ಮಂದಿರದಿಂದ ಪಥ ಸಂಚಲನ ಹೊರಟು ವೇಣೂರು ಶ್ರೀ ಮಹಾವೀರ ನಗರದ ಭರತೇಶ ಸಭಾ ಭವನದ ವರೆಗೆ ಜರುಗಿತು.

ಬಳಿಕ ಭರತೇಶ ಸಭಾ ಭವನದಲ್ಲಿ ಜರುಗಿದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರು ಶೀಲಾ ಎಸ್. ಹೆಗ್ಡೆ ವಹಿಸಿದ್ದರು. ಜಿಲ್ಲಾ ಬೌದ್ದಿಕ್ ಪ್ರಮುಖ್ ಪ್ರತಿಭಾ ರವರು ಬೌದ್ದಿಕ್ ನ್ನು ನೆರವೇರಿಸಿದರು. ವೇದಿಕೆಯಲ್ಲಿ ಪುತ್ತೂರು ಜಿಲ್ಲಾ ಸಂಚಾಲಿಕ ಸವಿತಾ ಭಟ್ ಉಪಸ್ಥಿತರಿದ್ದರು. ಪಥ ಸಂಚಲನದಲ್ಲಿ ಸುಮಾರು 500 ಗಣವೇಷಧಾರಿಗಳು ಭಾಗವಹಿಸಿದರು.

ಈ ಸಂದರ್ಭದಲ್ಲಿ ಸುಳ್ಯದ ಶಾಸಕಿ ಭಾಗೀರತಿ ಮುರುಳ್ಯ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಸಂಘ ಚಾಲಕ ವಿನಯಚಂದ್ರ, ಪ್ರಕಾಶ್ ಪುರೋಹಿತ್ ವೇಣೂರು, ಪುತ್ತೂರು ಜಿಲ್ಲಾ ಸಂಚಾಲಕಿ ಪೂರ್ಣಿಮಾ, ಅಧಿಕಾರಿ ವರ್ಗ ಪ್ರಾಂತ ಸಹ ಬೌದ್ಧಿಕ್ ಪ್ರಮುಖ್ ಮೀನಾಕ್ಷಿ, ಪ್ರಾಂತ ಶಾರೀರಿಕ್ ಪ್ರಮುಖ್ ಶಿಲ್ಪಾ, ವಿಭಾಗ ಕಾರ್ಯವಾಹಿಕ ಗಿರಿಜಾ ಭಟ್, ವಿಭಾಗ ಸಹ ಕಾರ್ಯವಾಹಿಕ ಕಲ್ಪನಾ, ಉಡುಪಿ ಜಿಲ್ಲಾ ಕಾರ್ಯವಾಹಿಕ ಶಶಿಕಲಾ ಮಣಿಯಾನಿ, ಮಂಗಳೂರು ವಿಭಾಗ ಶಾರೀರಿಕ ಪ್ರಮುಖ್ ರಾಜಲಕ್ಷ್ಮಿ, ವಿಭಾಗ ಸಹ ಶಾರೀರಿಕ ಪ್ರಮುಖ್ ಚಿತ್ರಾಕ್ಷಿ, ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯವಾಹಿಕ ಸುಷ್ಮಾ, ಸಂಘದ ಹಿತೈಷಿಗಳು ಉಪಸ್ಥಿತರಿದ್ದರು.ಜಿಲ್ಲಾ ಕಾರ್ಯವಾಹಿಕಾ ವೇದಾವತಿ ಜನಾರ್ಧನ ಸ್ವಾಗತಿಸಿದರು. ವೇಣೂರು ತಾಲೂಕು ಕಾರ್ಯವಾಹಿಕ ರೋಹಿಣಿ ವಂದಿಸಿದರು.

Related posts

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

Suddi Udaya

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಪ್ರಥಮ ಹಂತದ ಗ್ರಾಮಸಭೆ, ವಿವಿಧ ಇಲಾಖಾಧಿಕಾರಿಗಳಿಂದ ಇಲಾಖಾ ಮಾಹಿತಿ

Suddi Udaya

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!