28.2 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎನ್‌ಎಸ್‌ಎಸ್ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಶಿಬಿರಕ್ಕೆ ಟಿ. ಸುದರ್ಶನ್ ನಾಯಕ್ ಆಯ್ಕೆ

ಬೆಳ್ತಂಗಡಿ: ಜ.26ರಂದು ಬೆಂಗಳೂರಿನ ಮಾಣಿಕ್ ಷಾ ಕ್ರೀಡಾಂಗಣದಲ್ಲಿ ನಡೆಯುವ ಕರ್ನಾಟಕ ರಾಜ್ಯ ಗಣರಾಜ್ಯೋತ್ಸವ ಪಥಸಂಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರ ತಂಡಕ್ಕೆ ಗುರುವಾಯನಕೆರೆಯ ಟಿ. ಸುದರ್ಶನ್ ನಾಯಕ್ ಅವರು ಆಯ್ಕೆಯಾಗಿದ್ದು ಪ್ರಸ್ತುತ ಯುವ ತರಬೇತಿ ಕೇಂದ್ರ, ಕುಂಬಳಗೂಡು, ಬೆಂಗಳೂರುನಲ್ಲಿ ನಡೆಯುವ ಎನ್‌ಎಸ್‌ಎಸ್ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಶಿಬಿರದಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಇವರು ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯಲ್ಲಿ ದ್ವಿತೀಯ ವರ್ಷದ ಬಿ.ಕಾಂ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಕಾಲೇಜಿನ ಎನ್‌ಎಸ್‌ಎಸ್ ಘಟಕದ ನಾಯಕರಾಗಿದ್ದಾರೆ. ಇವರು ಎನ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ಈಗಾಗಲೇ ಕಾರವಾರದಲ್ಲಿ ನಡೆದ ರಾಷ್ಟ್ರೀಯ ಏಕತಾ ಶಿಬಿರ, ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲೂ ಪಾಲ್ಗೊಂಡಿದ್ದಾರೆ. ಅಲ್ಲದೆ, ರಾಜ್ಯ ಮಟ್ಟದ ಗಣರಾಜ್ಯೋತ್ಸವ ಪೂರ್ವ ತರಬೇತಿ ಶಿಬಿರ ಹಾಗೂ ಕೇರಳದಲ್ಲಿ ನಡೆದ ದಕ್ಷಿಣ ವಲಯ ಗಣರಾಜ್ಯೋತ್ಸವ ಪೂರ್ವ ತರಬೇತಿ ಶಿಬಿರದಲ್ಲೂ ಭಾಗವಹಿಸಿ ಉತ್ತಮ ಅನುಭವ ಪಡೆದಿದ್ದಾರೆ.

Related posts

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

Suddi Udaya

ಬಂಟರ ಸಂಘ ಕಾವಳಕಟ್ಟೆ ವಲಯ : ಕಲಾಭಿನಂದನೆ – 2026 ಸಂಭ್ರಮಾಚರಣೆ

Suddi Udaya

ಪುತ್ತೂರು ಬಿಲ್ಲವ ಸಂಘದಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ರವರಿಗೆ ಅಭಿನಂದನೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿಯ ಬ್ರಹ್ಮಕಲಶೋತ್ಸವ: ಮಾ.2ರಂದು ಹೊರೆಕಾಣಿಕೆಯಲ್ಲಿ ಲಾಯಿಲದಿಂದ “ಒಂದು ಸಾವಿರ” ತೆಂಗಿನಕಾಯಿ, ಸಮರ್ಪಣೆ; ಬಿ.ಕೆ ಧನಂಜಯ್ ರಾವ್

Suddi Udaya

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

Suddi Udaya
error: Content is protected !!