March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಗುರುವಾಯನಕೆರೆ ಪಾಲಡ್ಕ ಒಕ್ಕೂಟದ 25ನೇ ವರ್ಷದ ಬೆಳ್ಳಿ ಹಬ್ಬ ಕಾರ್ಯಕ್ರಮ ನಡೆಯಿತು.

ಒಕ್ಕೂಟದ ಅಧ್ಯಕ್ಷೆ ಕುಸುಮಾವತಿರವರ ಅಧ್ಯಕ್ಷತೆಯಲ್ಲಿ ದೀಪವನ್ನು ಪ್ರಜ್ವಲಿಸುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಯೋಜನಾಧಿಕಾರಿ ಅಶೋಕ್ ಪ್ರಾಸ್ತಾವಿಕವಾಗಿ ಮಾತನಾಡಿ ಯೋಜನೆ ನಡೆದು ಬಂದ ದಾರಿ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಯೋಜನೆಯ ಕಾರ್ಯಕ್ರಮ, ಯೋಜನೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ತಿಳಿಸಿದರು.

ಒಕ್ಕೂಟದ ವರದಿಯನ್ನು ಸವಿತಾ ಮಂಡಿಸಿದರು. ಒಕ್ಕೂಟದ ತಂಡದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಯನ್ನು ಆಯೋಜನೆ ಮಾಡಿ ಬಹುಮಾನ ವಿತರಿಸಲಾಯಿತು. ಯೋಜನೆಯ ಮೂಲ ಫಲಾನುಭವವಿಗಳನ್ನು ಈ ಸಂದರ್ಭ ಗೌರವಿಸಲಾಯಿತು. ರಾಮಣ್ಣ ಗೌಡ ಅನಿಸಿಕೆ ವ್ಯಕ್ತಪಡಿಸಿದರು, ಧರ್ಣಪ್ಪ ಕುಲಾಲ್ , ಸುಮತಿ ದಂಪತಿಗಳಿಗೆ ಗೌರವಿಸಲಾಯಿತು.

ಅನಂತ್ರಾಮ ಗೌಡ, ಪಳ್ಳ ತಳ ರವರ ಕಾರ್ಯಕ್ರಮ ಉದ್ದೇಶಿಸಿ, ಯೋಜನೆಯಿಂದ ಸಿಗುವ ಸೌಲಭ್ಯವನ್ನು ಸರಿಯಾದ ಉದ್ದೇಶಕ್ಕೆ ನಾವು ಬಳಕೆ ಮಾಡಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗೋಪಾಲ ಕೋಲಾಜೆ,( ಜನಜಾಗೃತಿ ವೇದಿಕೆ ಅಧ್ಯಕ್ಷರು) ಮಡಂತ್ಯಾರು ವಲಯ ಅಧ್ಯಕ್ಷ ಜಯ ಪೂಜಾರಿ, ಎಸ್.ಡಿ.ಎಮ್ ಸಿ ಅಧ್ಯಕ್ಷ ಪ್ರೀತ ಕುಮಾರ ಕುದ್ರಡ್ಕ, ಒಕ್ಕೂಟದ ಅಧ್ಯಕ್ಷ ವಿಜಯ್, ಹಾಗೂ ಡೊಮ್ಮಯ್ಯ ಶೆಟ್ಟಿಗಾರ್, ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ, ಮೇಲ್ವಿಚಾರಕರು ಕೇಶವ, ಸೇವಾಪ್ರತಿನಿಧಿ ನಂದಿನಿ, ಪರಮೇಶ್ವರ್, ಕಲಾವತಿ, ವಿಪತ್ತು ಘಟಕದ ಸ್ವಯಂ ಸೇವಕರು ಅವಿನಾಶ ಹಾಗೂ ಕಾರ್ಯಕ್ರಮವನ್ನು ಪುಪ್ಪ ನಿರೂಪಣೆ ಮಾಡಿದರು. ಶುಭಲತಾ ಸ್ವಾಗತಿಸಿದರು, ಅನುಪಮಾ ಧನ್ಯವಾದ ಮಾಡಿದರು.

Related posts

ಅಳದಂಗಡಿ: ಪ್ರಸಿದ್ದ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ ಅನಾರೋಗ್ಯದಿಂದ ನಿಧನ

Suddi Udaya

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಬಿದ್ದ ದ್ವಿಚಕ್ರ ವಾಹನ

Suddi Udaya
error: Content is protected !!