September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

ಉಜಿರೆ: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ಸೇರಿದಂತೆ ತುಮಕೂರು ಜಿಲ್ಲಾಡಳಿತದ ಸಹಯೋಗದಲ್ಲಿ ತುಮಕೂರು ಜಿಲ್ಲೆಯ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಕರ್ನಾಟಕ ಕ್ರೀಡಾಕೂಟ 2026’ ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ತಂಡವು ಪ್ರಥಮ ಸ್ಥಾನ ಪಡೆಯುವ ಮೂಲಕ ಪಂದ್ಯಾಟದ ಚಾಂಪಿಯನ್ ಗಳಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ತಂಡದಲ್ಲಿ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಾದ ವರ್ಷಿತ, ರಶ್ಮಿ, ಸುರಕ್ಷಾ, ಪಲ್ಲವಿ, ಧನುಶ್ರೀ, ಪೂಜಾ, ಭೂಮಿಕ, ಸಹನಾ, ಸುಪ್ರಿಯ ಹಾಗೂ ದೀಪಿಕಾ ಭಾಗವಹಿಸಿದ್ದರು. ಪ್ರಶಸ್ತಿ ವಿಜೇತ ತಂಡಕ್ಕೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ತರಬೇತಿಯನ್ನು ನೀಡಿದ್ದಾರೆ.

ವಿಜೇತ ತಂಡಕ್ಕೆ ಎಸ್.ಡಿ.ಎಂ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಕಾಲೇಜಿನ ಪ್ರಾಚಾರ್ಯ ಪ್ರೊ. ವಿಶ್ವನಾಥ್ ಪಿ, ಪ್ರಮೋದ್ ಕುಮಾರ್ ಬಿ. ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್, ದೈಹಿಕ ಶಿಕ್ಷಣ ಉಪನ್ಯಾಸಕ ಮತ್ತು ತರಬೇತುದಾರ ಸುದೀನ್ ಪೂಜಾರಿ, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಸಿಬ್ಬಂದಿವರ್ಗದವರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.

Related posts

ತುರ್ತು ಕರೆಗೆ ಸ್ಪಂದಿಸಿದ ಉಜಿರೆ-ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಗೆ ಚಿನ್ನದ ಪದಕ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಉಜಿರೆ: ಕುಂಟಿನಿ ಮದ್ರಸದಲ್ಲಿ ಸ್ಥಾಪಕ ದಿನಾಚರಣೆ

Suddi Udaya

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya
error: Content is protected !!