September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಪುತ್ರಬೈಲಿ‌ನಲ್ಲಿ ಸರಕಾರದ ಕುಡಿಯುವ ನೀರಿನ ಬಾವಿ ಕಲುಷಿತಗೊಳಿಸಿ ಜಾಗ ಒತ್ತುವರಿ

ಬೆಳ್ತಂಗಡಿ : ಸರಕಾರ ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ಬಾವಿಯನ್ನು ನಿರ್ಮಾಣ ಮಾಡಿರುವುದನ್ನು ಸ್ಥಳೀಯ ನಿವಾಸಿ ಸರಕಾರಿ ಜಾಗವನ್ನು ಸಮೇತ ಒತ್ತುವರಿ ಮಾಡಿಕೊಂಡಿದ್ದರೂ ಗ್ರಾಮ ಪಂಚಾಯತ್ ಮಾತ್ರ ಮೌನವಹಿಸಿರುವ ಬಗ್ಗೆ ಗ್ರಾಮಸ್ಥರೊಬ್ಬರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ದೂರು ನೀಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲು ಬಳಿಯ ಅಂಗನವಾಡಿ ಕೇಂದ್ರದ ಪಕ್ಕದಲ್ಲಿರುವ ಸಾರ್ವಜನಿಕರಿಗಾಗಿ ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಕುಡಿಯುವ ಬಾವಿಯನ್ನು ಸರಕಾರಿ ಜಾಗದಲ್ಲಿ ಮಾಡಿರುವುದನ್ನು ಸ್ಥಳೀಯ ವ್ಯಕ್ತಿಯೊಬ್ಬರು ಅದನ್ನು ಒತ್ತುವರಿ ಮಾಡಿಕೊಂಡ ಬೇಲಿಯನ್ನು ಹಾಕಿ ನೀರನ್ನು ಯಾರು ಕುಡಿಯದಂತೆ ನೀರಿನ ಬಾವಿಯೊಳಗೆ ಮಣ್ಣು ಮತ್ತು ಕಸವನ್ನು ಹಾಕಿ ಉಪಯೋಗಿಸದಂತೆ ಮಾಡಿದ್ದಾರೆ.

ಈ ಬಾವಿಯ ಬಗ್ಗೆ ಸ್ಥಳೀಯ ಆಡಳಿತ ಯಾವುದೇ ಕಾನೂನು ಕ್ರಮಗಳನ್ನು ಕೈಗೊಳ್ಳದೆ ಇರುವುದರಿಂದ ಇದರ ಬಗ್ಗೆ ಕೂಲಂಕುಷ ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಅದಲ್ಲದೆ ಈ ಬಾವಿಯನ್ನು ಕಲುಷಿತ ಮಾಡಿದವರಿಂದಲ್ಲೇ ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಉಪಯೋಗಕ್ಕೆ ಅನುಕೂಲ ಮಾಡಿಕೊಂಡಬೇಕಾಗಿ ಲಾಯಿಲ ನಿವಾಸಿ ಅನ್ಸರ್ ಬಿ ಎಂಬವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಬೆಳ್ತಂಗಡಿ ತಹಶೀಲ್ದಾರ್, ಲಾಯಿಲ ಅಭಿವೃದ್ಧಿ ಅಧಿಕಾರಿ, ಲಾಯಿಲ ಗ್ರಾಮ ಪಂಚಾಯತ್ ಗೆ ಜ.19 ರಂದು ದೂರು ಅರ್ಜಿ ಸಲ್ಲಿಸಿದ್ದಾರೆ.

Related posts

ಕನ್ಯಾಡಿ ಸೇವಾಭಾರತಿಯಿಂದ ಮಂಗಳೂರಿನಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಪದ್ಮುಂಜದಲ್ಲಿ ವಾಹನ ತಡೆದು ಹಲ್ಲೆ ಪ್ರಕರಣ-ಶರತ್ ಚೌಟನಿಗೆ ಜೈಲು ಶಿಕ್ಷೆ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!