September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಬ್ಯೂಟೀಷಿಯನ್ ಮತ್ತು ಎಂಬ್ರಾಯಿಡರಿ ತರಬೇತಿ ಸಮಾರೋಪ

ಲಾಯಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಪ್ರತೀ ವರ್ಷ ಸ್ವಉದ್ಯೋಗ ಆಧಾರಿತ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದಾರೆ. ಫಲಾನುಭವಿಗಳು ಇದನ್ನು ತಮ್ಮ ಸ್ವಾವಲಂಬಿ ಬದುಕಿಗೆ ಪ್ರೇರೇಪಿಸಿಕೊಳ್ಳಬೇಕು. ಯಾರಲ್ಲಿ ಛಲ ಇಚ್ಛಾಶಕ್ತಿ ಇರುತ್ತದೆಯೋ ಅವರು ಯಶಸ್ಸು ಗಳಿಸಬಹುದು. ಯಶಸ್ಸಿಗೆ ಕಠಿಣ ಪರಿಶ್ರಮ ಪಡಬೇಕು ಎಂದು ಸಮಾರೋಪ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಕೃಷ್ಣ ಟಿ. ಇವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ತರಬೇತಿ ಕೇಂದ್ರದ ಪ್ರಾಂಶುಪಾಲ ರಮೇಶ್ ಇವರು ಉದ್ಯೋಗದಲ್ಲಿ ಪರಿಪೂರ್ಣತೆ ಹೊಂದಲು ನಿರಂತರ ಅಭ್ಯಾಸ ಮತ್ತು ಕಲಿಕಾ ಮನೋಭಾವ ಇರಬೇಕು. ಹಾಗಿದ್ದಾಗ ಅದರ ಫಲ ಸಿಗಲು ಸಾಧ್ಯ ಎಂದರು. ನಂತರ ಎಲ್ಲಾ ತರಬೇತಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭಹಾರೈಸಿದರು.


ಒಟ್ಟು 45 ಮಂದಿ ಮಂದಿ ಅಭ್ಯರ್ಥಿಗಳು ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಕು. ಹರ್ಷಿತಾ ಮೇಕಪ್ ಆರ್ಟಿಸ್ಟ್ ಇವರು ತರಗತಿ ನೀಡಿದ್ದಾರೆ. ಟೈಲರಿಂಗ್ ಶಿಕ್ಷಕಿ ಉಷಾ ಉಪಸ್ಥಿತರಿದ್ದರು. ತರಬೇತಿ ಸಂಯೋಜಕಿ ಜಯಶ್ರೀ ಕಾರ್ಯಕ್ರಮ ನಿರ್ವಹಣೆ ಮಾಡಿ ಧನ್ಯವಾದ ನೀಡಿದರು.

Related posts

ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ

Suddi Udaya

ಪಡಂಗಡಿ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ತೋಟತ್ತಾಡಿ ಚರ್ಚ್ ನಲ್ಲಿ ಯುವಕರಿಂದ ತಯಾರಿಸಲ್ಪಟ್ಟ ೨೨ ಅಡಿ ಎತ್ತರದ ಕ್ರಿಸ್‌ಮಸ್ ನಕ್ಷತ್ರ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya
error: Content is protected !!