23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಪಡಂಗಡಿಯಲ್ಲಿ ಲೆಜೆಂಡ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆಮಂತ್ರಣ ಪತ್ರಿಕೆ ಬಿಡುಗಡೆ: ರ್‍ಯಾಶ್ ತಂಡದಲ್ಲಿ ಆಡಲಿದ್ದಾರೆ ಶಾಸಕ ಹರೀಶ್ ಪೂಂಜ,ಆಟಗಾರರು ಪುಲ್ ಖುಷ್

ಪಡಂಗಡಿ: ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಹಾಮದ ಬಾವ ಸವಿ ನೆನಪಿಗಾಗಿ, ದಿ ಸುಬ್ರಹ್ಮಣ್ಯ ಪ್ರಸಾದ್ ವೇದಿಕೆಯಲ್ಲಿ ಪಡಂಗಡಿ ಪ್ರೀಮಿಯರ್ ಲೀಗ್ ಆಂಡರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿ ಜ 31, ಫೆ 1 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜರವರು ಬಿಡುಗಡೆಗೊಳಿಸಿ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ. ಕ್ರಿಕೆಟ್ ಬಗ್ಗೆ ಅತೀವ ಆಸಕ್ತಿ ಹೊಂದಿರುವ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ರ್‍ಯಾಶ್ ತಂಡದಲ್ಲಿ ಮೈದಾನಕ್ಕಿಳಿದು ಕ್ರಿಕೆಟ್ ಆಡಲಿದ್ದಾರೆ. ಈಗಾಗಲೇ ತಂಡದ ಆಟಗಾರರಿಗೆ ಶಾಸಕರು ಜೊತೆಯಾಗಿ ಕ್ರಿಕೆಟ್ ಆಡುತ್ತಿರುವುದು ಖುಷಿ ನೀಡಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

ಕ್ರಿಕೆಟ್ ಪಂದ್ಯಾವಳಿಯು ಎರಡು ದಿನಗಳ ಕಾಲ ನಡೆಯಲಿದ್ದು ವಿಶೇಷವಾಗಿ ಪಡಂಗಡಿಯ 40ವರ್ಷ ಮೇಲ್ಪಟ್ಟ ಮಾಜಿ ಆಟಗಾರರಿಗೂ ಲೆಜೆಂಡ್ಸ್ ಟ್ರೋಫಿ ಏರ್ಪಡಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಸಂತೋಷ್ ಕುಮಾರ್ ಜೈ‌ನ್ ಪಡಂಗಡಿ, ವಿತೇಶ್ ಕುಮಾರ್ ಜೈನ್, ಆಸಿದ್, ಸುಕೇಶ್ ಪೂಜಾರಿ, ಅಶ್ವಿತ್ ಮೂಲ್ಯ, ಪ್ರಶಾಂತ್ ಮೂಲ್ಯ, ಉಮೇಶ್ ಪೂಜಾರಿ, ಆಸೀಫ್ ಮೊದಲಾದವರು ಉಪಸ್ಥಿತರಿದ್ದರು.

Related posts

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಉಜಿರೆ : ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವಾರ್ಷಿಕ ಕಾರ್ಯಚುಟುವಟಿಕೆಗಳ ಸಮಾರೋಪ

Suddi Udaya
error: Content is protected !!