26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎನ್‌ಎಸ್‌ಎಸ್ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಶಿಬಿರಕ್ಕೆ ಟಿ. ಸುದರ್ಶನ್ ನಾಯಕ್ ಆಯ್ಕೆ

ಬೆಳ್ತಂಗಡಿ: ಜ.26ರಂದು ಬೆಂಗಳೂರಿನ ಮಾಣಿಕ್ ಷಾ ಕ್ರೀಡಾಂಗಣದಲ್ಲಿ ನಡೆಯುವ ಕರ್ನಾಟಕ ರಾಜ್ಯ ಗಣರಾಜ್ಯೋತ್ಸವ ಪಥಸಂಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರ ತಂಡಕ್ಕೆ ಗುರುವಾಯನಕೆರೆಯ ಟಿ. ಸುದರ್ಶನ್ ನಾಯಕ್ ಅವರು ಆಯ್ಕೆಯಾಗಿದ್ದು ಪ್ರಸ್ತುತ ಯುವ ತರಬೇತಿ ಕೇಂದ್ರ, ಕುಂಬಳಗೂಡು, ಬೆಂಗಳೂರುನಲ್ಲಿ ನಡೆಯುವ ಎನ್‌ಎಸ್‌ಎಸ್ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಶಿಬಿರದಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಇವರು ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯಲ್ಲಿ ದ್ವಿತೀಯ ವರ್ಷದ ಬಿ.ಕಾಂ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಕಾಲೇಜಿನ ಎನ್‌ಎಸ್‌ಎಸ್ ಘಟಕದ ನಾಯಕರಾಗಿದ್ದಾರೆ. ಇವರು ಎನ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ಈಗಾಗಲೇ ಕಾರವಾರದಲ್ಲಿ ನಡೆದ ರಾಷ್ಟ್ರೀಯ ಏಕತಾ ಶಿಬಿರ, ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲೂ ಪಾಲ್ಗೊಂಡಿದ್ದಾರೆ. ಅಲ್ಲದೆ, ರಾಜ್ಯ ಮಟ್ಟದ ಗಣರಾಜ್ಯೋತ್ಸವ ಪೂರ್ವ ತರಬೇತಿ ಶಿಬಿರ ಹಾಗೂ ಕೇರಳದಲ್ಲಿ ನಡೆದ ದಕ್ಷಿಣ ವಲಯ ಗಣರಾಜ್ಯೋತ್ಸವ ಪೂರ್ವ ತರಬೇತಿ ಶಿಬಿರದಲ್ಲೂ ಭಾಗವಹಿಸಿ ಉತ್ತಮ ಅನುಭವ ಪಡೆದಿದ್ದಾರೆ.

Related posts

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ: ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಕಾರ್ನರ್ ಶುಭಾರಂಭ

Suddi Udaya

ಅ.8-10: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೂತನ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ತಂಡದ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!