25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್’ ಕ್ರೀಡಾಕೂಟ: ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಎಸ್.ಡಿ.ಎಂ ಕಾಲೇಜಿನ ಚಿಂತನ್ ಬಿ ಸಿ, ಪುನೀತ್ ಆಯ್ಕೆ

ಉಜಿರೆ : ಫೆಬ್ರವರಿ 05 ರಿಂದ 12ರವರೆಗೆ ದೆಹಲಿಯಲ್ಲಿ ನಡೆಯಲಿರುವ ಪುರುಷರ ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್ ಕ್ರೀಡಾಕೂಟಕ್ಕೆ ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಪದವಿ ಕೇಂದ್ರದ ವಿದ್ಯಾರ್ಥಿಗಳಾದ ಚಿಂತನ್ ಬಿ ಸಿ ಮತ್ತು ಪುನೀತ್ ಕುಮಾರ್ ಆಯ್ಕೆಗೊಂಡಿದ್ದಾರೆ.

ಮಡಿಕೇರಿಯ ಗೋಣಿಕೊಪ್ಪಲು ಮೂಲದ ಚೆನ್ನಪ್ಪ ಮತ್ತು ನಳಿನಾಕ್ಷಿ ದಂಪತಿಗಳ ಪುತ್ರನಾದ ಪುನೀತ್ ಹಾಗು ಮೂಡುಬಿದಿರೆ ಎಡಪದವಿನ ಜನಾರ್ದನ ಗೌಡ ಮತ್ತು ವಿಜಯ ದಂಪತಿಗಳ ಪುನೀತ್ ಕುಮಾರ್ ಈ ಹಿಂದೆ ತುಮಕೂರಿನ ಸಿದ್ಧಾರ್ಥ್ ಇನ್ಸ್ಟಿಟ್ಯೂಟ್ ನಲ್ಲಿ ನಡೆದ ಆಲ್ ಇಂಡಿಯಾ ಇಂಟರ್ ಯೂನಿವರ್ಸಿಟಿ ಪುರುಷರ ನೆಟ್ ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿರುತ್ತಾರೆ. ಜೊತೆಗೆ ರಾಜಸ್ಥಾನದ ಜೈಪುರದಲ್ಲಿ ನಡೆದ ಆಲ್ ಇಂಡಿಯಾ ಇಂಟರ್ ಯೂನಿವರ್ಸಿಟಿ ಪುರುಷರ ನೆಟ್ ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿರುತ್ತಾರೆ.

ಕಾಲೇಜಿನ ಇದೇ ವಿದ್ಯಾರ್ಥಿಗಳು ಇತ್ತೀಚೆಗೆ ತೆಲಂಗಾಣ ರಾಜ್ಯದ ಹೈದರಾಬಾದ್ ನಲ್ಲಿ ನಡೆದ 43ನೇ ಸೀನಿಯರ್ ನ್ಯಾಷನಲ್ ನೆಟ್ ಬಾಲ್ ಪಂದ್ಯಾವಳಿ ಯಲ್ಲಿ ಸಕ್ರೀಯವಾಗಿ ಪಾಲ್ಗೊಂಡು, ತಮಿಳುನಾಡಿನಲ್ಲಿ ನಡೆದ ಸೀನಿಯರ್ ಸೌತ್ ನ್ಯಾಷನಲ್ ನೆಟ್ ಬಾಲ್ ಪಂದ್ಯಾಕೂಟದಲ್ಲೂ ಭಾಗವಹಿಸಿರುತ್ತಾರೆ.

ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಭಾರತ ತಂಡದ ಅಂತಿಮ ಆಯ್ಕೆ ಪ್ರಕ್ರಿಯೆ ಫೆಬ್ರವರಿಯ ಮೊದಲ ವಾರದಲ್ಲಿ ನಡೆಯಲಿದ್ದು, ರಾಷ್ಟ್ರ ಮಟ್ಟದದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕ್ರೀಡಾ ಪಟುಗಳಿಗೆ ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪೂಜಾರಿ ತರಬೇತಿಯನ್ನು
ನೀಡಿರುತ್ತಾರೆ.

Related posts

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya

ಕುಮಟಾ ಸದ್ಗುರು ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಚಾರಣೆ: ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪಾದುಕ ಪೂಜೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಬೋಶ್ ಇಂಟರ್ನ್‌ಶಿಪ್ ಆಯ್ಕೆ ಪ್ರಕ್ರಿಯೆ

Suddi Udaya

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya
error: Content is protected !!