ಕಡಿರುದ್ಯಾವರ: ವಳಂಬ್ರ ಕುಟುಂಬಸ್ಥರ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಜ. 18ರಂದು ಕಡಿರುದ್ಯಾವರ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಿತು.
ಈ ವೇಳೆ ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮ ಗೌಡ, ಕಾರ್ಯದರ್ಶಿ ಗಣೇಶ್ ಗೌಡ, ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಡಿ. ಎಂ ಗೌಡ, ಮಾಜಿ ನಿರ್ದೇಶಕ ಆನಂದ ಗೌಡ, ಮಹಿಳಾ ವೇದಿಕೆಯ ಪದಾಧಿಕಾರಿಗಳಾದ ಶೋಭಾ ನಾರಾಯಣ ಗೌಡ, ದಿವಿಜ ಗಣೇಶ್ ಗೌಡ ಉಪಸ್ಥಿತರಿದ್ದು ಸನ್ಮಾನಿಸಿದರು.











