ಬೆಳ್ತಂಗಡಿ: ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾಂಸ್ಕೃತಿಕ ಸಮುಚ್ಚಯ, ನುಜಿಪ್ಪಾಡಿ, ಕಾಸರಗೋಡು, ವತಿಯಿಂದ ಕನ್ನಡ ಭವನದ ರಜತ ಸಂಭ್ರಮ ನಾಡ – ನುಡಿ ಹಬ್ಬ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಮಟ್ಟದ ಕುಣಿತ ಭಜನಾ ಗುರುಗಳಾಗಿ ಹಾಗೂ ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ

ವಿ ಹರೀಶ್ ನೆರಿಯ ಬೆಳ್ತಂಗಡಿ ಇವರ ಈ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್-2026 ” ಶ್ರೀ ಕೃಷ್ಣ ದೇವರಾಯ ವೇದಿಕೆಯಲ್ಲಿ ಕನ್ನಡ ಭವನದ ಸಂಸ್ಥಾಪಕ ಡಾ. ವಾಮನ ರಾವ್ ಬೇಕಲ್ ರವರು ಹಾಗೂ ಪ್ರಮುಖ ಗಣ್ಯರ ಸಮ್ಮುಖದಲ್ಲಿ ಗೌರವಪೂರ್ವಕವಾಗಿ ಪ್ರಶಸ್ತಿ ಪ್ರಧಾನ ಮಾಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಇದರ ಸದಸ್ಯರು ಜೊತೆ ಇದ್ದರು











